ಮೊಬೈಲ್ ಕಾಲರ್‌ ಟ್ಯೂನ್‌ನಲ್ಲೂ ಮೊಳಗುತ್ತಿದೆ 'ಹರ್ ಘರ್ ತಿರಂಗಾ'

Sampriya
ಮಂಗಳವಾರ, 13 ಆಗಸ್ಟ್ 2024 (20:26 IST)
Photo Courtesy X
ಬೆಂಗಳೂರು: ದೇಶದಾದ್ಯಂತ ಇದೇ 15ರಂದು 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಅದ್ಧೂರಿ ತಯಾರಿ ನಡೆಸಲಾಗುತ್ತಿದೆ. ತ್ರಿವರ್ಣ ಧ್ವಜವನ್ನು ಹಾರಿಸಲು ಜನರಿಗೆ ಹೆಚ್ಚಿನ ಉತ್ತೇಜನ ನೀಡುವ ಸಲುವಾಗಿ 'ಹರ್ ಘರ್ ತಿರಂಗಾ' ಅಭಿಯಾನವನ್ನು ಶುರು ಮಾಡಲಾಗಿದೆ. ಇದೀಗ ಎಲ್ಲಡೆಯೂ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ. ಅದರಂತೆ ಮೊಬೈಲ್ ಕಾಲರ್‌ ಟ್ಯೂನ್‌ ಮೂಲಕ ಅಭಿಯಾನವನ್ನು ಶುರು ಮಾಡಲಾಗಿದೆ.

2024 ರ ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ಪ್ರತಿ ಮನೆಯಲ್ಲೂ ಧ್ವಜಾರೋಹಣ ಮಾಡಲು ನಾಗರಿಕರನ್ನು ಪ್ರೋತ್ಸಾಹಿಸುವ ಸಲುವಾಗಿ 'ಹರ್ ಘರ್ ತಿರಂಗ್' ಕಾಲರ್ ಟ್ಯೂನ್ ಅಭಿಯಾನ ಶುರು ಮಾಡಲಾಗಿದೆ.

ಇದೀಗ ಕರೆ ಮಾಡಿದಾಗ ಮೋದಿ ಧ್ವನಿಯಲ್ಲಿ 'ಹರ್‌ ಘರ್ ತಿರಂಗ್' ಎಂಬ ರಿಂಗ್‌ ಟೋನ್ ಕೇಳಿಸುತ್ತಿದೆ.  78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಈ ವರ್ಷದ ಆಗಸ್ಟ್ 9 ರಿಂದ 15 ರವರೆಗೆ ಅಭಿಯಾನದ ಮೂರನೇ ಆವೃತ್ತಿಯನ್ನು ಆಚರಿಸಲಾಗುತ್ತಿದೆ. ಮಕ್ಕಳಿಗೆ ದೇಶದ ಬಗ್ಗೆ ಜಾಗೃತಿ ಮೂಡಿಸಲು ಶಾಲೆಗಳಲ್ಲಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಅಭಿಯಾನ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿ, "ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವಂತೆ, ಮತ್ತೊಮ್ಮೆ #HarGharTiranga ಅನ್ನು ಸ್ಮರಣೀಯ ಸಾಮೂಹಿಕ ಆಂದೋಲನವನ್ನಾಗಿ ಮಾಡೋಣ. ನಾನು ನನ್ನ ಪ್ರೊಫೈಲ್ ಚಿತ್ರವನ್ನು ಬದಲಾಯಿಸುತ್ತಿದ್ದೇನೆ ಮತ್ತು ಅದೇ ರೀತಿ ಮಾಡುವ ಮೂಲಕ ನಮ್ಮ ತ್ರಿವರ್ಣ ಧ್ವಜವನ್ನು ಆಚರಿಸಲು ನನ್ನೊಂದಿಗೆ ಸೇರಲು ನಾನು ನಿಮ್ಮೆಲ್ಲರನ್ನು ಕೋರುತ್ತೇನೆ. ಹೌದು, ನಿಮ್ಮ ಸೆಲ್ಫಿಗಳನ್ನು ಹರ್ಘರ್ತಿರಂಗದಲ್ಲಿ ಹಂಚಿಕೊಳ್ಳಿ. .com," ಎಂದು ಬರೆದುಕೊಂಡಿದ್ದಾರೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

ಮುಂದಿನ ಸುದ್ದಿ