Webdunia - Bharat's app for daily news and videos

Install App

ಆದಾಯ ತೆರಿಗೆ ಇಲಾಖೆ ಜಂಟಿ ಆಯುಕ್ತರ ಮೇಲೆ ಮಗಳಿಗೆ ಕಿರುಕುಳ ಆರೋಪ

Webdunia
ಬುಧವಾರ, 1 ಜೂನ್ 2016 (09:24 IST)
ಆದಾಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಡಾಕ್ಟರ್ ಸಿದ್ದರಾಮಯ್ಯನವರ ಮೇಲೆ ಪ್ರೀತಿಸಿ ಮದುವೆಯಾದ ಮಗಳನ್ನು ಆಕೆಯ ಪತಿಯಿಂದ ಬೇರ್ಪಡಿಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ. 
 
ಕಮರ್ಷಿಯಲ್ ಟ್ಯಾಕ್ಸ್ ಜಂಟಿ ಆಯುಕ್ತ ಡಾಕ್ಟರ್ ಸಿದ್ದರಾಮಯ್ಯ ಅವರ ಮಗಳು  ಡ್ರೈವಿಂಗ್ ಶಾಲೆಯಲ್ಲಿ ತರಬೇತಿ ನೀಡುವ ಚಾಲಕನನ್ನು ಪ್ರೀತಿಸಿದ್ದರು. ಅವರಿಬ್ಬರು ಕಳೆದ ಗುರುವಾರ ಮಹದೇಶ್ವರ ದೇವಸ್ಥಾನದಲ್ಲಿ ಮದುವೆಯಾಗಿದ್ದರು.
 
ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಆಯುಕ್ತರು ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ನಿನ್ನೆ ಠಾಣೆಗೆ ಬಂದ ಆಕೆಯ ಪತಿ ವಿಶ್ವ ತಾವಿಬ್ಬರು ಪ್ರೀತಿಸಿ ಮದುವೆಯಾಗಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. 
 
ನಿನ್ನೆ ಯುವತಿಯ ಪೋಷಕರನ್ನು ಸಹ ಠಾಣೆಗೆ ಕರೆ ತರಲಾಯಿತು. ಆದರೆ ಯುವತಿ ಪೋಷಕರ ಜತೆ ಹೋಗಲು ಒಪ್ಪಿಲ್ಲವಾದ್ದರಿಂದ ಆಕೆಯನ್ನು ರಿಮ್ಯಾಂಡ್ ಹೋಮ್‌ಗೆ ಕಳುಗಿಸಲಾಗಿದೆ. 
 
ಮಗಳು ಮಾನಸಿಕ ಅಸ್ವಸ್ಥೆ ಎಂದು ಆಕೆಯ ಪೋಷಕರು ನಿಮಾನ್ಸ್ ಆಸ್ಪತ್ರೆಯಿಂದ ಸರ್ಟಿಫಿಕೇಟ್ ತಂದಿದ್ದರು. ಆದರೆ ಅದು ಸುಳ್ಳು ಪ್ರಮಾಣ ಪತ್ರ. ಪ್ರತಿಷ್ಠೆಯ ಕಾರಣಕ್ಕೆ ನಮ್ಮ ಮದುವೆಯನ್ನವರು ವಿರೋಧಿಸುತ್ತಿದ್ದಾರೆ. ನಾವಿಬ್ಬರು ಎರಡು ಕುಟುಂಬದವರನ್ನು ಒಪ್ಪಿಸಿ ಮದುವೆಯಾಗಬೇಕೆಂದಿದ್ದೆವು. ಆದರೆ ಅವರು ನನ್ನನ್ನು ಬಿಡುವಂತೆ ಆಕೆಗೆ ದೈಹಿಕ. ಮಾನಸಿಕ ಹಿಂಸೆ ನೀಡಲು ಆರಂಭಿಸಿದಾಗ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಹೋಗಿ ಮದುವೆಯಾದೆವು ಎಂದು ಯುವತಿಯ ಪತಿ ವಿಶ್ವ ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಧುನಿಕ ಹಿಟ್ಲರ್ ಖಮೇನಿ ಅಸ್ತಿತ್ವ ಹೆಚ್ಚು ದಿನ ಇರಲ್ಲ: ಇಸ್ರೇಲ್ ರಕ್ಷಣಾ ಸಚಿವ ವಾರ್ನಿಂಗ್‌

ಮುಸ್ಲಿಂ ಮೀಸಲಾತಿ ಮಾಡಿ ಹಿಂದುಳಿದವರಿಗೆ ಭಾರೀ ಅನ್ಯಾಯ: ಪ್ರಲ್ಹಾದ್ ಜೋಶಿ

ಗೃಹಲಕ್ಷ್ಮಿ: ಬಾಕಿ ಹಣದ ಬಗ್ಗೆ ಬಿಗ್‌ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್‌

ಮುಸ್ಲಿಮರಿಗೆ ಮತ್ತೊಂದು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರಿನ ಅಕ್ಷಯ್ ಕೊನೆಗೂ ಬದುಕುಳಿಯಲಿಲ್ಲ: ಅಜ್ಜ, ಅಜ್ಜಿಯ ಹೋಮವೂ ಫಲವಾಗಲಿಲ್ಲ

ಮುಂದಿನ ಸುದ್ದಿ
Show comments