Publish Date: Mon, 14 Nov 2022 (13:40 IST)
Updated Date: Mon, 14 Nov 2022 (13:42 IST)
ಬೆಂಗಳೂರು : ಹೆಂಡತಿಯ ಕಿರುಕುಳಕ್ಕೆ ಬೇಸತ್ತು ಪತಿ ಹಾಗೂ ಆತನ ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ರಾಜಗೋಪಾಲನಗರದ ಶ್ರೀಗಂಧ ನಗರದಲ್ಲಿ ಘಟನೆ ನಡೆದಿದ್ದು, ಮೃತರನ್ನು ಭಾಗ್ಯಮ್ಮ (57) ಹಾಗೂ ಶ್ರೀನಿವಾಸ್ (33) ಎಂದು ಗುರುತಿಸಲಾಗಿದೆ. ಮೃತ ಶ್ರೀನಿವಾಸ್ ಪೋಷಕರಿಗೆ ವಯಸ್ಸಾಗಿತ್ತು.
ಹಾಗಾಗಿ ಕಳೆದ ಒಂದು ತಿಂಗಳ ಹಿಂದೆಯಷ್ಟೇ ಶ್ರೀನಿವಾಸ್ ಮಡಿಕೇರಿಯಲ್ಲಿದ್ದ ತನ್ನ ತಂದೆ, ತಾಯಿಯನ್ನು ಬೆಂಗಳೂರಿನ ತನ್ನ ಮನೆಗೆ ಕರೆದುಕೊಂಡು ಬಂದಿದ್ದ.
ಆದರೆ ಶ್ರೀನಿವಾಸ್ ಪತ್ನಿ ಸಂಧ್ಯಾಳಿಗೆ ಇದು ಇಷ್ಟವಿರಲಿಲ್ಲ. ತನ್ನ ತಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದಾರೆ.