Webdunia - Bharat's app for daily news and videos

Install App

ಕೇರಳ ಚಿಪ್ಸ್ ಚಪ್ಪರಿಸಿಕೊಂಡು ತಿನ್ನುತ್ತಿದ್ದೀರಾ: ಹಾಗಿದ್ದರೆ ಹುಷಾರು

Krishnaveni K
ಶನಿವಾರ, 9 ನವೆಂಬರ್ 2024 (10:25 IST)
ಬೆಂಗಳೂರು: ಕೇರಳದಿಂದ ಬರುವ ಚಿಪ್ಸ್, ಹಲ್ವಾ ಸೇರಿದಂತೆ ಕುರುಕಲು ತಿಂಡಿಗಳನ್ನು ಚಪ್ಪರಿಸಿಕೊಂಡು ತಿನ್ನುತ್ತಿದ್ದರೆ ಹುಷಾರಾಗಿರಿ. ರಾಜ್ಯಕ್ಕೆ ಕೇರಳದಿಂದ ಬರುವ ತಿಂಡಿಗಳಲ್ಲಿ ಹಾನಿಕಾರಕ ಅಂಶಗಳು ಪತ್ತೆಯಾಗಿದೆ.

ಕೇರಳದಲ್ಲಿ ತಯಾರಿಸಿ ಕರ್ನಾಟಕದ ಗಡಿ ಭಾಗಗಳಲ್ಲಿ ಮಾರಾಟ ಮಾಡುತ್ತಿದ್ದಸುಮಾರು 90 ಬಗೆಯ ಕುರುಕಲು ತಿಂಡಿಗಳ ಮಾದರಿಯನ್ನು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಪರೀಕ್ಷೆಗೊಳಪಡಿಸಿದೆ. ಈ ವೇಳೆ 31 ಮಾದರಿ ಆಹಾರಗಳಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದ್ದು ಅಸುರಕ್ಷಿತ ಎಂದು ತಿಳಿದುಬಂದಿದೆ.

ವಿಶೇಷವಾಗಿ ಕೊಡಗು ಜಿಲ್ಲೆಯಲ್ಲಿ ಮಾರಾಟವಾಗುತ್ತಿದ್ದ ಕೇರಳ ಚಿಪ್ಸ್, ಹಲ್ವಾ, ಮಿಕ್ಸರ್, ಮುರುಕು, ಡ್ರೈ ಫ್ರೂಟ್ಸ್ ಸೇರಿದಂತೆ ವಿವಿಧ ರೀತಿಯ ತಿಂಡಿಗಳಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ. ಈ ತಿನಿಸುಗಳಲ್ಲಿ ಸನ್ ಸೇಟ್ ಯೆಲ್ಲೋ, ಅಲ್ಲೂರ ರೆಡ್, ಅಜೋರುಬಿನ್, ಟಾರ್ಟ್ರಾಜಿನ್ ಸೇರಿದಂತೆ ಹಾನಿಕಾರಕ ಕೃತಕ ಬಣ್ಣಗಳನ್ನು ಸೇರಿಸಿರುವುದು ಪತ್ತೆಯಾಗಿದೆ.

ಈ ತಿನಿಸುಗಳು ಕೊಡುಗು ಮಾತ್ರವಲ್ಲದೆ, ಗಡಿ ಜಿಲ್ಲೆಗಳಾದ ಮಂಗಳೂರು, ಕಾಸರಗೋಡು ಜೊತೆಗೆ ರಾಜ್ಯ ರಾಜಧಾನಿ ಬೆಂಗಳೂರಿಗೂ ಮಾರಾಟವಾಗಿರುವ ಶಂಕೆಯಿದೆ. ಈ ಹಾನಿಕಾರಕ ಅಂಶಗಳು ಮನುಷ್ಯನ ದೇಹಕ್ಕೆ ಸೇರಿದತೆ ಕರುಳಿನ ಕ್ಯಾನ್ಸರ್, ಉರಿಯೂತದಂತಹ ಸಮಸ್ಯೆ ಬರಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ
Show comments