Select Your Language

Notifications

webdunia
webdunia
webdunia
webdunia

ಮತ್ತೆ ಬಯಲಾಯಿತು ಕಿರುಕುಳ ಪ್ರಕರಣ: ಇನ್ಸ್‌ಪೆಕ್ಟರ್ ಹುದ್ದೆಗೆ ಗುಡ್‌ಬೈ ಹೇಳಿದ ಕಬ್ಬಾಳ್ ರಾಜ್

ಮತ್ತೆ ಬಯಲಾಯಿತು ಕಿರುಕುಳ ಪ್ರಕರಣ: ಇನ್ಸ್‌ಪೆಕ್ಟರ್ ಹುದ್ದೆಗೆ ಗುಡ್‌ಬೈ ಹೇಳಿದ ಕಬ್ಬಾಳ್ ರಾಜ್
ಉಡುಪಿ , ಗುರುವಾರ, 22 ಸೆಪ್ಟಂಬರ್ 2016 (18:07 IST)
ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಹಲವು ಅಧಿಕಾರಿಗಳು ಆತ್ಮಹತ್ಯೆಗೆ ಶರಣು ಹಾಗೂ ರಾಜೀನಾಮೆ ನೀಡಿರುವ ಬೆನ್ನಲ್ಲೇ ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣಾ ಸಬ್ ಇನ್ಸ್‌ಪೆಕ್ಟರ್ ಕಬ್ಟಾಳ್ ರಾಜ್ ಎಚ್.ಡಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 
 
ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಬ್ ಇನ್ಸ್‌ಪೆಕ್ಟರ್ ಕಬ್ಟಾಳ್ ರಾಜ್ ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಈ ಕುರಿತು ಪ್ರತಿಕ್ರಿಯೆ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಟಿ.ಬಾಲಕೃಷ್ಣ, ಈ ಹಿಂದೆ ನಾನು ಸಬ್ ಇನ್ಸ್‌ಪೆಕ್ಟರ್ ಕಬ್ಟಾಳ್ ರಾಜ್ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ವೈಯಕ್ತಿಕ ಕಾರಣದಿಂದ ಅವರು ರಾಜೀನಾಮೆ ನೀಡಿದ್ದಾರೆ. ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. 
 
ಖಡಕ್ ಪೊಲೀಸ್ ಅಧಿಕಾರಿಯಾಗಿದ್ದ ಕಬ್ಟಾಳ್ ರಾಜ್ ಎಚ್.ಡಿ ಹಲವು ಅಕ್ರಮ ಚಟುವಟಿಕೆ ನಡೆಸುವವರ ವಿರುದ್ಧ ತೊಡೆ ತಟ್ಟಿ ನಿಷ್ಠಾವಂತ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದರು. ಅವರು ರಾಜೀನಾಮೆ ನೀಡಿರುವುದಕ್ಕೆ ಪೊಲೀಸ್ ಇಲಾಖೆಯ ವಿರುದ್ಧ ತೀವ್ರ ಆಕೋಶ ವ್ಯಕ್ತವಾಗಿದೆ, 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ವಿವಾದ: ಸಚಿವೆ ಉಮಾಭಾರತಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ