Publish Date: Tue, 25 Aug 2026 (15:41 IST)
Updated Date: Tue, 25 Aug 2026 (15:45 IST)
ಬೆಂಗಳೂರು: ನೈಸ್ ಯೋಜನೆ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಎಚ್ಡಿ ಕುಮಾರಸ್ವಾಮಿ ಏನು ದಾಖಲಾತಿ ಬಿಡುಗಡೆ ಮಾಡುತ್ತಾರೋ ಮಾಡಲಿ ಎಂದು ಸಚಿವ ಚಲುವರಾಯಸ್ವಾಮಿ ಸವಾಲೆಸೆದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ದಾಖಲೆ ಬಿಡುಗಡೆ ಮಾಡಲಿ.
ಅವರು ಇದುವರೆಗೂ ದಾಖಲೆ ಬಿಡುಗಡೆ ಮಾಡ್ತೀನಿ ಎಂದು ಹೇಳಿದರು, ಕಳೆದ 3 ವರ್ಷದಲ್ಲಿ ಯಾವುದಾದರೂ ದಾಖಲೆ ಬಿಡುಗಡೆ ಮಾಡಿದ್ದಾರಾ ಎಂದು ಪ್ರಶ್ನೆ ಮಾಡಿದರು.
ನೈಸ್ ಕಂಪನಿ ವಿಚಾರದಲ್ಲಿ ಕುಮಾರಸ್ವಾಮಿ ಹಿಟ್ ಅಂಡ್ ರನ್ ಕೇಸ್ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಕೇಂದ್ರ ಮಂತ್ರಿಯಾಗಿ ಕ್ಯಾಬಿನೆಟ್ ಗೆ ಹೋಗ್ತಾರೋ ಇಲ್ಲವೋ ಗೊತ್ತಿಲ್ಲ. ಬೆಂಗಳೂರಿನಲ್ಲಿ ಮಾತ್ರ ಇರುತ್ತಾರೆ. ಅದು ಹೇಗೆ ಉಕ್ಕು ಕೈಗಾರಿಕಾ ಇಲಾಖೆ ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ವಿಜಯವಾಡದಲ್ಲಿ ಫ್ಯಾಕ್ಟರಿ ಕೊಡೋದು ಪ್ರಧಾನಮಂತ್ರಿಗಳ ಭರವಸೆ ಆಗಿತ್ತು ಮಾಡಿದ್ರು. ಆದರೆ ಕುಮಾರಸ್ವಾಮಿ ಅವರು ಕರ್ನಾಟಕಕ್ಕೆ ಏನ್ ಮಾಡಿದ್ದಾರೆ ಎಂದು ಹೇಳಲಿ.
ಹೆಚ್ಎಂಟಿ ಲಾಭ ಮಾಡುತ್ತಿದೆ. ಎಲ್ಲಿಗೆ ಹೋಯ್ತು ಗಿಫ್ಟ್? ಗಿಫ್ಟ್ ಕೊಟ್ಟಿದ್ದಾರೆ ಗೊತ್ತಾ? ಅವರು ದುಡ್ಡು ಕೊಟ್ಟು ತಗೊಂಡರೆ ಏನು ತಪ್ಪು ಬಿಡಿ. ಅವರ ಅವಧಿ ಎಷ್ಟು ದಿನ ಇದೆ. ಅವರು ಏನು ಮಾಡುತ್ತಾರೆ ನೋಡೋಣ ಎಂದು ಹೆಚ್ಡಿಕೆ ವಿರುದ್ಧ ಕಿಡಿಕಾರಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ