Webdunia - Bharat's app for daily news and videos

Install App

ಮುಂದುವರಿದ ಆತ್ಮಹತ್ಯೆ ಯತ್ನ ಸರಣಿ : ಹಾಸನ ಎಸಿ ಇ.ವಿಜಯಾ ಆತ್ಮಹತ್ಯೆಗೆ ಯತ್ನ

Webdunia
ಗುರುವಾರ, 21 ಜುಲೈ 2016 (18:29 IST)
ರಾಜ್ಯದಲ್ಲಿ ಅಧಿಕಾರಿಗಳ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿದ್ದು, ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಮಹಿಳಾ ಪಿಎಸ್‌ಐ ರೂಪಾ ಅವರು ಆತ್ಮಹತ್ಯೆಗೆ ಯತ್ನಿಸಿದ ಬೆನ್ನಲ್ಲೇ ಹಾಸನ ಉಪ ವಿಭಾಗಾಧಿಕಾರಿ ಇ.ವಿಜಯಾ ಎಂಬ ಅಧಿಕಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.
 
ಹಾಸನ ಉಪ ವಿಭಾಗಾಧಿಕಾರಿಯಾಗಿರುವ ಇ.ವಿಜಯಾ ಅವರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ತನ್ನ ತಾಯಿಯ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿರುವ ವಿಜಯಾ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
 
ಕೆಲವು ದಿನಗಳ ಹಿಂದ ವರ್ಗಾವಣೆ ಹೊಂದಿದ್ದ ಇ.ವಿಜಯಾ ಅವರು ಕೆಎಟಿ ಮೊರೆ ಹೋಗಿ, ತಡೆಯಾಜ್ಞೆ ಪಡೆದುಕೊಂಡು ಕರ್ತವ್ಯಕ್ಕೆ ಹಾಜರಾಗಿದ್ದರು. ಅಷ್ಟರಲೇ ಅವರ ಸ್ಥಾನಕ್ಕೆ ಸರಕಾರ ಬೇರೆ ಅಧಿಕಾರಿಯನ್ನು ನೇಮಕ ಮಾಡಿದ್ದರಿಂದ ಬಿಕ್ಕಟ್ಟು ಉಂಟಾಗಿತ್ತು. ಈ ಕುರಿತು ಇಂದು ಕಛೇರಿಯ ಎದುರು ಪ್ರತಿಭಟನೆಯೂ ನಡೆದಿತ್ತು. ಈ ಬೆಳವಣಿಗೆಯಿಂದ ಬೇಸತ್ತು ವಿಜಯಾ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
 
ಕೆಲಸದ ಒತ್ತಡದಿಂದ ಬೇಸತ್ತು ನನ್ನ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ವಿಜಯಾ ತಾಯಿ ಆರೋಪಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಎಡಿಷನಲ್ ಎಸ್‌ಪಿ ಶೋಭಾರಾಣಿ ಅವರು ಘಟನೆಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಟ್ಲ: ಸಾರಡ್ಕ ಚೆಕ್ ಪೋಸ್ಟ್ ಬಳಿ ರಾತ್ರಿ ಸಂಚರಿಸುವಾಗ ಹುಷಾರ್: ದರೋಡೆ ಗ್ಯಾಂಗ್ ವಿಡಿಯೋ ವೈರಲ್

ಬಿಗ್‌ಬಾಸ್‌ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಕೇಳಿಬಂತು ಗಂಭೀರ ಆರೋಪ: ಏನಿದು ವಂಚನೆ ಪ್ರಕರಣ

ಅಮುಲ್ ನಮ್ದೇ, ನಂದಿನಿನೂ ನಮ್ದೇ: ಧ್ವೇಷ ಯಾಕೆ ಮಾಡ್ತೀರಿ ಎಂದ ಸಿಟಿ ರವಿ

ಸೇವ್ ನಂದಿನಿ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಮೆಟ್ರೋದಲ್ಲಿ ಅಮೂಲ್ ಗೆ ಅವಕಾಶ ಕೊಟ್ಟಿತಾ

ನಮ್ಮ ಹಣದಿಂದಲೇ ವಿಧಾನಸೌಧ ನಿರ್ಮಾಣ ಮಾಡಿರೋದು ಪ್ರವೇಶ ಶುಲ್ಕ ಯಾಕೆ: ಮೋಹನ್ ದಾಸ್ ಪೈ

ಮುಂದಿನ ಸುದ್ದಿ
Show comments