ಹಾಸನ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯನ್ನು ಪದೇ ಪದೇ ಮುಂದೂಡುವ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಜಟಾಪಟಿ ನಡೆಸಿವೆ ಎನ್ನುವ ಆರೋಪ ಕೇಳಿ ಬರುತ್ತಿದೆ.
ಹಾಸನ ಜಿಲ್ಲಾ ಪಂಚಾಯತ್ನಲ್ಲಿ ಜೆಡಿಎಸ್ 23 ಸದಸ್ಯರ ಸಂಖ್ಯಾ ಬಲ ಹೊಂದಿದ್ದು, ಕಾಂಗ್ರೆಸ್ 16 ಸದಸ್ಯರ ಸಂಖ್ಯಾ ಬಲ ಹೊಂದಿದೆ. ಅಧಿಕಾರದ ಆಸೆಗೆ ಬಿದ್ದು ಎರಡು ಪಕ್ಷಗಳು ಜಟಾಪಟಿ ನಡೆಸಿವೆ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ ಜೆಡಿಎಸ್ ಜಿಲ್ಲಾ ಪಂಚಾಯತ ಸದಸ್ಯರು ಅಧಿಕಾರದಾಸೆಗೆ ಗೈರು ಹಾಜರಾಗುವ ಮೂಲಕ ಕೋರಂ ಕೊರತೆಯನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪ ಕೇಳಿ ಬರುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಚ್.ಡಿ.ರೇವಣ್ಣ, ಜೆಡಿಎಸ್ ಅಧಿಕಾರಕ್ಕಾಗಿ ಹಾತೊರೆಯುತ್ತಿಲ್ಲ. ಈ ಎಲ್ಲ ಆವಾಂತರಕ್ಕೂ ಕಾಂಗ್ರೆಸ್ ನೇರ ಹೊಣೆ ಎಂದು ಆರೋಪಿಸಿದ್ದಾರೆ.
ವೆಬ್ದುನಿಯಾ ಮೊಬೈಲ್ ಆಪ್ (ಡೌನ್ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.