ಹಾಸನಾಂಬೆ ದೇವಾಲಯ ಬಾಗಿಲು ಅಕ್ಟೋಬರ್ 13ಕ್ಕೆ ಒಪೆನ್

Webdunia
ಭಾನುವಾರ, 11 ಸೆಪ್ಟಂಬರ್ 2022 (16:53 IST)
ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕಲ್ಪಿಸುವ ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲು ಅಕ್ಟೋಬರ್ 13ಕ್ಕೆ ತೆರೆಯಲಿದೆ. ಆದ್ದರಿಂದ ಜಿಲ್ಲಾಡಳಿತ 15 ದಿನದ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಮಹಾಮಾರಿ ಕೊರೊನಾ ನಂತರ ಇದೀಗ ಅದ್ಧೂರಿಯಾಗಿ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡುವುದಕ್ಕೆ ಜಿಲ್ಲಾಡಳಿತ ಯೋಜನೆ ರೂಪಿಸಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. ಆದ್ದರಿಂದ ಈಗಾಗಲೇ ಶಾಸಕರ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಿಎಂ ಸೇರಿದಂತೆ ರಾಜ್ಯದ ಎಲ್ಲಾ ಗಣ್ಯರನ್ನು ಆಹ್ವಾನಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
 
ಹಾಸನಾಂಬ ದೇವಾಲಯದ ಬಾಗಿಲು ಅಕ್ಟೋಬರ್ 13ರಿಂದ ತೆರೆಯಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಅಧಿದೇವತೆಯ ದರ್ಶನವನ್ನು ಭಕ್ತರು ಪಡೆಯಬಹುದಾಗಿದೆ. ಒಟ್ಟು 15 ದಿನಗಳ ಕಾಲ ದೇವಾಲಯ ತೆರೆಯಲಿದೆ. ಆಶ್ವಿಜ ಮಾಸದ ಶುಕ್ಲ ಪಕ್ಷದ ಮೊದಲ ಗುರುವಾರದಂದು ಹಾಸನಾಂಬೆಯ ಬಾಗಿಲು ತೆರೆಯಲಿದ್ದು, ಬಲಿಪಾಡ್ಯಮಿಯ ಮಾರನೇಯ ದಿನ ಶಾಸ್ತ್ರೋಕ್ತವಾಗಿ ಗರ್ಭಗುಡಿಗೆ ಬಾಗಿಲು ಹಾಕಲಾಗುತ್ತದೆ. ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾಧಿಕಾರಿಗಳು ಬಾಗಿಲು ತೆರೆಯುವ ಮತ್ತು ಮುಚ್ಚುವ ವೇಳೆ ಉಪಸ್ಥಿತರಿರುತ್ತಾರೆ. ಕಳೆದ ಎರಡು ವರ್ಷ ಕೊರೊನಾ ಹಿನ್ನೆಲೆ ಭಕ್ತರಿಗೆ ಹಲವು ನಿಬಂಧನೆಗಳನ್ನು ಹಾಕಲಾಗಿತ್ತು. ಈ ಬಾರಿ ಅದ್ಧೂರಿಯಾಗಿ ಹಾಸನಾಂಬೆ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments