ಹಾಸನಾಂಬೆ ದರ್ಶನ ಭಕ್ತರ ಪಾಲಿಗೆ ಇಂದು ಕೊನೇ ದಿನ

Krishnaveni K
ಶನಿವಾರ, 2 ನವೆಂಬರ್ 2024 (10:15 IST)
ಹಾಸನ: ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಾಲಯದ ಗರ್ಭಗುಡಿ ನಾಳೆ ಮುಚ್ಚಲಿದ್ದು, ಇಂದು ಭಕ್ತರ ಪಾಲಿಗೆ ಕೊನೆಯ ದಿನ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

ಸಾರ್ವಜನಿಕ ದರ್ಶನಕ್ಕೆ ಇಂದು ಕೊನೆಯ ದಿನವಾಗಿರುವುದರಿಂದ ಸಾಕಷ್ಟು ಸಂಖ್ಯೆಯಲ್ಲಿ ದೇವಿಯ ದರ್ಶನಕ್ಕೆ ಭಕ್ತರು ಬರುತ್ತಿದ್ದಾರೆ. ಜೊತೆಗೆ ವೀಕೆಂಡ್ ಕೂಡಾ ಆಗಿರುವುದರಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಈ ಬಾರಿ ಅವ್ಯವಸ್ಥೆಗಳ ನಡುವೆಯೂ ದಾಖಲೆಯ ಆದಾಯ ಸಂಗ್ರಹವಾಗಿದೆ.

ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿಯ ಗರ್ಭಗುಡಿ ತೆರೆಯಲಾಗುತ್ತದೆ. ನಾಳೆಗೆ ಗರ್ಭಗುಡಿ ಮುಚ್ಚಿದರೆ ಮುಂದಿನ ವರ್ಷವೇ ಮತ್ತೆ ತೆರೆಯಲಾಗುತ್ತದೆ. 13 ದಿನಗಳ ಕಾಲ ಅದ್ಧೂರಿಯಾಗಿ ಜಾತ್ರೆ ನಡೆದಿದ್ದು ಈ ಬಾರಿ ದೀಪಾಲಂಕಾರ, ವಿಶೇಷ ಸಾಂಸ್ಕೃತಿ ಕಾರ್ಯಕ್ರಮಗಳೊಂದಿಗೆ ನೋಡುಗರ ಮನ ಸೆಳೆದಿದೆ.

ಈ ಬಾರಿ ಕೇವಲ ವಿಶೇಷ ಪಾಸ್ ನಿಂದಲೇ ಕೋಟ್ಯಾಂತರ ರೂಪಾಯಿ ಆದಾಯ ಗಳಿಕೆಯಾಗಿದೆ. ಹಾಸನಾಂಬ ದೇವಾಲಯದ ಜಾತ್ರೆ ಅದ್ಧೂರಿಯಾಗಿ ನಡೆಸಲು ಪೌರ ಕಾರ್ಮಿಕರಿಂದ ಹಿಡಿದು ಪೊಲೀಸ್ ಇಲಾಖೆ, ಅಧಿಕಾರಿಗಳವರೆಗೂ ಶ್ರಮಿಸಿದ್ದಾರೆ. ಎಲ್ಲರ ಶ್ರಮದ ಫಲವಾಗಿ ಅದ್ಧೂರಿಯಾಗಿ ಜಾತ್ರೆ ನೆರವೇರಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments