Webdunia - Bharat's app for daily news and videos

Install App

21 ವರ್ಷಗಳ ಹಾಸನ ಜಿಲ್ಲೆಯ ಜನರ ಕನಸು ನನಸು

Webdunia
ಭಾನುವಾರ, 26 ಮಾರ್ಚ್ 2017 (10:26 IST)
ಮಾಜಿ ಪ್ರಧಾನಿ ದೇವೇಗೌಡರ ಕಾಲದಲ್ಲಿ ಮಂಜೂರಾಗಿದ್ದ ಹಾಸನ ಮತ್ತು ಬೆಂಗಳೂರು ರೈಲು ಸಂಚಾರಕ್ಕೆ ಇಂದು ಚಾಲನೆ ಸಿಕ್ಕಿದೆ. ರೈಲ್ವೆ ಸಚಿವ ಸುರೇಶ್ ಪ್ರಭು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಯೋಜನೆಗೆ ಚಾಲನೆ ನೀಡಿದರು. ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಸಿದ್ದರಾಮಯ್ಯ, ಕೇಂದ್ಸರ ಸಚಿವ ಅನಂತ್ ಕುಮಾರ್, ಸಚಿವರಾದ ಆರ್.ವಿ. ದೇಶಪಾಂಡೆ, ಎ. ಮಂಜು ಮತ್ತಿತರರು ಉಪಸ್ಥಿತರಿದ್ದರು. 

ಬೆಳಗ್ಗೆ 6.30ಕ್ಕೆ ಹೊರಡುವ ರೈಲು 9.15ಕ್ಕೆ ಬೆಂಗಳೂರಿಗೆ ತೆರಳಲಿದೆ. ಸಂಜೆ 6.15ಕ್ಕೆ ಮತ್ತೆ ಬೆಂಗಳೂರಿನಿಂದ ತೆರಳಲಿದೆ. ಈ ಹೊಸ ರೈಲು ಮಾರ್ಗದಿಂದ ಬೆಂಗಳೂರು-ಹಾಸನದ ಪ್ರಯಾಣ 50 ಕಿ.ಮೀ ನಷ್ಟು ತಗ್ಗಲಿದ್ದು,  ಬೆಂಗಳೂರು ಮತ್ತು ಮಂಗಳೂರು ಸಂಚಾರದ ಸಮಯ ಸಹ ಕಡಿಮೆಯಾಗಲಿದೆ.

ಈ ರೈಲು ಚನ್ನರಾಯಪಟ್ಟಣ, ಬಿ.ಜಿ. ನಗರ, ಶ್ರವಣಬೆಳಗೊಳ, ಯಡಿಯೂರು, ಕುಣಿಗಲ್, ನೆಲಮಂಗಲ, ಚಿಕ್ಕಬಾಣಾವರಗಳಲ್ಲಿ ನಿಲ್ದಾಣ ಹೊಂದಿದೆ.

1997ರಲ್ಲಿ ಬೆಂಗಳೂರು ಮತ್ತು ಹಾಸನ ರೈಲು ಮಾರ್ಗ ನಿರ್ಮಾಣಕ್ಕೆ 400 ಕೊಟಿ ರೂ. ಮಂಜೂರಾಗಿತ್ತು. 20 ವರ್ಷಗಳ ಬಳಿಕ ಯೋಜನೆ ಸಂಪೋರ್ಣವಾಗಿದ್ದು, 1300 ಕೋಟಿ ಖರ್ಚಾಗಿದೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam terror attack: ದಾಳಿ ನಡೆಸುತ್ತಿರುವ ಉಗ್ರರ ವಿಡಿಯೋ ವೈರಲ್

Pehalgam terror attack: ಪೆಹಲ್ಗಾಮ್ ದಾಳಿ ಬೆನ್ನಲ್ಲೇ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

Arecanut price today: ಅಡಿಕೆ ಬೆಲೆ ಇಂದು ಹೆಚ್ಚಾಗಿದೆಯೇ ಇಲ್ಲಿದೆ ವಿವರ

Pehalgam terror attack: ದಾಳಿಯ ರೂವಾರಿ ಈತನೇ, ಉಗ್ರ ಸೈಫುಲ್ಲಾಗಿದೆ ಭಾರತದ ಪ್ರಧಾನಿಗಿಂತಲೂ ಭದ್ರತೆ, ಪಾಕಿಸ್ತಾನದಲ್ಲಿ ವಿಐಪಿ

Pehalgam terror attack: ದಾಳಿಯಲ್ಲಿ ಉಗ್ರರಿಂದ ಈ ಕನ್ನಡಿಗ ಮಹಿಳೆಯನ್ನು ಬದುಕಿಸಿದ್ದು ಒಂದು ಐಸ್ ಕ್ರೀಂ

ಮುಂದಿನ ಸುದ್ದಿ
Show comments