Webdunia - Bharat's app for daily news and videos

Install App

ಮೋದಿ ಆಗಮಿಸ್ತರೆಂದು ಮಂಗಳೂರಿನಲ್ಲಿ ತರಾತುರಿಯಲ್ಲಿ ರಸ್ತೆ ದುರಸ್ತಿ

Webdunia
ಭಾನುವಾರ, 28 ಆಗಸ್ಟ್ 2022 (17:18 IST)
ಸೆ.2 ರಂದು ಮಂಗಳೂರಿಗೆ ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ತರಾತುರಿಯಲ್ಲಿ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದೆ. ಕಳಪೆ ಕಾಮಗಾರಿ ಮತ್ತು ತರಾತುರಿ ಕಾಮಗಾರಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಗುಂಡಿಗಳಿಗೆ ಬಿದ್ದು ಸಾಕಷ್ಟು ಜನರು ಮೃತಪಟ್ಟಿದ್ದಾರೆ. ಪ್ರತಿನಿತ್ಯ ಅಪಘಾತದಲ್ಲಿ ಸಾಕಷ್ಟು ಜನ ಗಾಯಗೊಳ್ಳುತ್ತಿದ್ದಾರೆ. ಆಗ ರಸ್ತೆ ದುರಸ್ತಿ ಮಾಡದೇ ಇದ್ದವರು ಈಗ ಡಾಮರೀಕರಣ ಮಾಡುತ್ತಿದ್ದಾರೆ. ಮಂಗಳೂರಿನಲ್ಲಿ ಮಳೆ ಇರುವುದರಿಂದ ಈ ಡಾಂಬರ್ ನಿಲ್ಲೋದಿಲ್ಲ. ಮೋದಿ ಅವರು ವಾಪಸ್ ಆಗುತ್ತಿದ್ದಂತೆ ಡಾಂಬರ್ ಕಿತ್ತು ಬರೋ ಸಾಧ್ಯತೆ ಇದೆ. ಪ್ರಧಾನಿ ಮೋದಿಗಾಗಿ ತೇಪೆ ಕಾರ್ಯ ಹಾಕುತ್ತಿರೋದಕ್ಕೆ ಜನರು ಆಕ್ರೋಶ ಹೊರಹಾಕಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೂಳೂರುವರೆಗೂ ರಸ್ತೆ ರಿಪೇರಿ ಮಾಡಲಾಗ್ತಿದೆ. ಏರ್ಪೋರ್ಟ್ ರಸ್ತೆಯಲ್ಲಿ ತುರ್ತು ದುರಸ್ತಿ ಕಾರ್ಯ ಮಾಡಲಾಗ್ತಿದೆ. ತರಾತುರಿಯಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ ಮಾಡಲಾಗ್ತಿದ್ದು, ರಸ್ತೆಗಳು ಕಳೆದ ಒಂದು ವರ್ಷದಿಂದ ಗುಂಡಿ ಬಿದ್ದು ಹದಗೆಟ್ಟಿವೆ ಎಂದು ಸರ್ಕಾರದ ದಿಢೀರ್​​​​ ನಡೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments