ಹಿಂದೂ ಧರ್ಮವನ್ನ ದ್ವೇಷಿಸುತ್ತಿದೆ, ಪರಂಪರೆಯ ಮೇಲೆ ದಾಳಿ ಮಾಡ್ತಿದೆ : ಅಮಿತ್ ಶಾ ಗುಡುಗು

Webdunia
ಸೋಮವಾರ, 4 ಸೆಪ್ಟಂಬರ್ 2023 (08:56 IST)
ಜೈಪುರ : INDIA ಒಕ್ಕೂಟವು ಹಿಂದೂ ಧರ್ಮವನ್ನ ದ್ವೇಷಿಸುತ್ತಿದೆ, ನಮ್ಮ ಪರಂಪರೆಯ ಮೇಲೆ ದಾಳಿ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ದಾರೆ.
 
ರಾಜಸ್ಥಾನದ ಡುಂಗರ್ಪುರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಚಾಲನೆ ನೀಡಿ ಮಾತನಾಡಿದ ಶಾ, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನ ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂಬ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಹೇಳಿಯನ್ನ ಖಂಡಿಸಿದ್ದಾರೆ.

ಇಂತಹ ಹೇಳಿಕೆಗಳಿಂದ INDIA ಹಿಂದೂ ಧರ್ಮವನ್ನ ದ್ವೇಷಿಸುತ್ತದೆ ಹಾಗೂ ನಮ್ಮ ಪರಂಪರೆಯ ಮೇಲೆ ದಾಳಿ ಮಾಡುತ್ತಿದೆ ಎಂಬುದನ್ನು ತೋರಿಸುತ್ತದೆ. ಅಲ್ಲದೆ, ಉದಯನಿಧಿ ಅವರ ಈ ಹೇಳಿಕೆಯು ವೋಟ್ ಬ್ಯಾಂಕ್ ರಾಜಕೀಯದ ಭಾಗವಾಗಿದೆ ಎಂದು ಕಿಡಿಕಾರಿದ್ದಾರೆ. 

ಐಎನ್ಡಿಐಎ ಒಕ್ಕೂಟ ಈ ದೇಶದ ಪರಂಪರೆ ಹಾಗೂ ಸನಾತನ ಧರ್ಮವನ್ನ ಅವಮಾನಿತ್ತಿದೆ. ಕಾಂಗ್ರೆಸ್ ಮತ್ತು ಡಿಎಂಕೆಯ ಉನ್ನತ ನಾಯಕರು ಮತ ಬ್ಯಾಂಕ್ ರಾಜಕಾರಣಕ್ಕಾಗಿ ಸನಾತನ ಧರ್ಮವನ್ನೇ ಮುಗಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆಯೂ ರಾಹುಲ್ ಗಾಂಧಿ ಅವರು, ಲಷ್ಕರ್-ಎ-ತೊಯ್ಬಾಗಿಂತ ಹಿಂದೂ ಸಂಘಟನೆಗಳು ಅಪಾಯಕಾರಿ ಎಂದು ಹೇಳಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸನಾತನ ಧರ್ಮವು ಜನರ ಹೃದಯವನ್ನ ಆಳುತ್ತಿದೆ. ಮೋದಿ ಗೆದ್ದರೆ ಸನಾತನ ಆಡಳಿತವೇ ಬರುತ್ತದೆ, ಸಂವಿಧಾನದ ಹಾದಿಯಲ್ಲೇ ಭಾರತ ಸಾಗುತ್ತದೆ ಎಂದು ಒತ್ತಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ಮುಕ್ತ ಭಾರತದತ್ತ ಮತ್ತೊಂದು ಹೆಜ್ಜೆ, ಛತ್ತೀಸ್‌ಗಢದಲ್ಲಿ 51 ನಕ್ಸಲರು ಶರಣು

ಈ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳಿನ ರಾಜ: ಸಚಿವ ಸೋಮಣ್ಣ

ಆರ್‌ಎಸ್‌ಎಸ್‌ ಯಾರ ವಿರುದ್ಧವೂ ಅಲ್ಲ: ಮೋಹನ್ ಭಾಗವತ್‌

ಮಲೇಷ್ಯಾದ ಪಿಎಂ ಅನ್ವರ್‌ರೊಂದಿಗೆ ಪ್ರಧಾನಿ ಮೋದಿ ಕಾರಿನಲ್ಲಿ ಪ್ರಯಾಣ

ಮೆಟ್ರೋ ಪ್ರಯಾಣ ದರ ಏರಿಕೆ ಚಿಂತೆಯಲ್ಲಿದ್ದವರಿಗೆ ಸ್ವಲ್ಪ ರಿಲ್ಯಾಕ್ಸ್‌

ಮುಂದಿನ ಸುದ್ದಿ
Show comments