Webdunia - Bharat's app for daily news and videos

Install App

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

Webdunia
ಭಾನುವಾರ, 4 ಜೂನ್ 2023 (16:16 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ, ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಆಹಾರ, ಕುಡಿಯುವ ನೀರು, ಸಂಚಾರಿ ಶೌಚಾಲಯ ಹಾಗೂ ವೈದ್ಯಕೀಯ ಸೌಲಭ್ಯ ಒದಗಿಸಿದ್ದಾರೆ.
 
ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತದ ದುರಂತದ ಕಾರಣ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು ರೈಲುಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದ್ದು, ಈಶಾನ್ಯ ರಾಜ್ಯಗಳಿಗೆ ಕೋಲ್ಕತ್ತಾ ಮುಂತಾದ ರಾಜ್ಯಗಳಿಗೆ ತೆರಳಬೇಕಿದ್ದ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾನದಲ್ಲೇ ದಿನ ಕಳೆಯುವಂತಹ ಪರಿಸ್ಥಿತಿ ಒದಗಿದ್ದರಿಂದ, ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಅಗತ್ಯ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತರು ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
 
ಈ ಹಿನ್ನಲೆಯಲ್ಲಿ ಬಿಬಿಎಂಪಿ ವಲಯ ಆಯುಕ್ತ ಪಿ.ಎನ್.ರವೀಂದ್ರ, ಜಂಟಿ ಆಯುಕ್ತರಾದ ಶ್ರೀಮತಿ ಪಲ್ಲವಿ ಮತ್ತು ತಂಡದವರ ಮಾರ್ಗದರ್ಶನದಲ್ಲಿ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ವಲಸೆ ಕಾರ್ಮಿಕರಿಗೆ ಊಟ, ತಿಂಡಿ, ನೀರು ಇತ್ಯಾದಿಗಳ ವ್ಯವಸ್ಥೆಯನ್ನು ಪೂರೈಸಲಾಗಿದೆ.ಬಿಬಿಎಂಪಿ ವತಿಯಿಂದ ಅವರಿಗೆ ವೈದ್ಯಕೀಯ ಸೌಲಭ್ಯ ಹಾಗೂ ಸಂಚಾರಿ ಶೌಚಾಲಯಗಳ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.
 
ಪಾಟೀಲ್, ಕಾರ್ಮಿಕ ಇಲಾಖೆ ಆಯುಕ್ತರು, ಉಮೇಶ್, ಉಪ ಕಾರ್ಮಿಕ ಆಯುಕ್ತರು,ಸಂತೋಷ್ ಹಿಪ್ಪರಗಿ, ಸಹಾಯಕ ಕಾರ್ಮಿಕ ಆಯುಕ್ತರು, ಇನ್ನಿತರ ಅಧಿಕಾರಿಗಳು ಪರಿಹಾರ ಕಾರ್ಯದ ನೇತೃತ್ವ ವಹಿಸಿದ್ದರು. ಈ ಪರಿಹಾರ ಕಾರ್ಯಕ್ಕೆ ಜೆಎಂಸಿ, ಕೆ೨ಕೆ, ಡಿಮರ‍್ಟ್, ಐಡಿಸಿ, ಕೆಎಂಎಫ್ ಸೇರಿದಂತೆ ಹಲವು ಖಾಸಗಿ ಸಂಸ್ಥೆಗಳು ಬೆಂಬಲ ನೀಡುವ ಮೂಲಕ ಕಷ್ಟದಲ್ಲಿರುವವರಿಗೆ ಸಹಾಯಹಸ್ತ ಚಾಚಿದ್ದಾರೆ.
 
ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ತಂಗಿರುವ ಪ್ರಯಾಣಿಕರ ಕಷ್ಟಗಳಿಗೆ ಸ್ಪಂದಿಸಿ, ಮರ‍್ಸಿ ಫೌಂಡೇಷನ್ , ಶ್ರೀ ತೌಸೀಫ್ ಮತ್ತು ತನ್ವೀರ್ , ಶ್ರೀ ಕ್ಲಿಫ್ಟಿನ್ ಹಾಗೂ ಮೈತ್ರಿ ಹಾಗೂ ತಂಡದವರ ಸ್ವಯಂ ಸೇವಕರು ಕೈ ಜೋಡಿಸಿದರು. ಮುಖ್ಯಮಂತ್ರಿಗಳು ಕಾರ್ಮಿಕರ ನೆರವಿಗೆ ಶ್ರಮಿಸಿದ ಸಂಘ ಸಂಸ್ಥೆಗಳು, ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments