Webdunia - Bharat's app for daily news and videos

Install App

ಹಾವೇರಿ ಸ್ವಾತಿಯ ಮರ್ಡರ್ ಗೆ ಭಯಂಕರ ಸ್ಕೆಚ್ ಹಾಕಿದ್ದ ಆರೋಪಿ ನಯಾಜ್

Krishnaveni K
ಶುಕ್ರವಾರ, 14 ಮಾರ್ಚ್ 2025 (17:46 IST)
Photo Credit: X
ಹಾವೇರಿ: ಹಿಂದೂ ಯುವತಿ ಸ್ವಾತಿ ಹತ್ಯೆಗೆ ಆರೋಪಿ ನಯಾಜ್ ಭಯಂಕರ ಐಡಿಯಾ ಮಾಡಿದ್ದ ಎಂಬ ವಿಚಾರ ಈಗ ಬಯಲಿಗೆ ಬಂದಿದೆ. ಇಲ್ಲಿದೆ ಹತ್ಯೆಯ ವಿವರ.

ಸ್ವಾತಿ ಮತ್ತು ನಯಾಜ್ ನಡುವೆ ಪ್ರೇಮ ಸಂಬಂಧವಿತ್ತು. ಇಬ್ಬರಿಗೂ ಹೋರಿ ಬೆದರಿಸುವ ಸ್ಪರ್ಧೆ ಎಂದರೆ ಕ್ರೇಜ್. ಹೀಗೆಯೇ ಇಬ್ಬರ ನಡುವೆ ಪರಿಚಯವಾಗಿ ಪ್ರೇಮಕ್ಕೆ ತಿರುಗಿತ್ತು. ನಯಾಜ್ ಸ್ನೇಹಿತ ವಿನಯ್, ದುರ್ಗಾಚಾರಿ ಎಂಬವರೂ ಸ್ವಾತಿಗೆ ಪರಿಚಿತರಾಗಿದ್ದರು.

ಇತ್ತೀಚೆಗೆ ನಯಾಜ್ ಸ್ವಾತಿಯನ್ನು ಬಿಟ್ಟು ತನ್ನ ಧರ್ಮದ ಹುಡುಗಿಯನ್ನು ಮದುವೆಯಾಗಲು ಹೊರಟಿದ್ದ. ಇದರ ಬಗ್ಗೆ ಸ್ವಾತಿ ನಯಾಜ್ ನನ್ನು ತರಾಟೆಗೆ ತೆಗೆದುಕೊಂಡಿದ್ದಳು. ಅಲ್ಲದೆ, ಬೇರೆ ಮದುವೆಯಾಗದಂತೆ ಕಿರಿ ಕಿರಿ ಮಾಡುತ್ತಿದ್ದಳು.

ಇದರಿಂದ ಕೆರಳಿದ್ದ ನಯಾಜ್ ತನ್ನ ಸ್ನೇಹಿತ ವಿನಯ್, ದುರ್ಗಾಚಾರಿ ಸಹಾಯದಿಂದ ಕೊಲೆಗೆ ಸ್ಕೆಚ್ ಹಾಕಿದ್ದ. ಅದರಂತೆ ನಯಾಜ್ ಮತ್ತು ಸ್ನೇಹಿತರು ಕಾರಿನಲ್ಲಿ ಉಪಾಯವಾಗಿ ಸ್ವಾತಿಯನ್ನು ಕರೆದುಕೊಂಡು ರಾಣೆಬೆನ್ನೂರು ಹೊರವಲಯದ ಸುವರ್ಣ ಪಾರ್ಕ್ ಗೆ ಕರೆದೊಯ್ದಿದ್ದರು.

ದಾರಿ ಮಧ್ಯೆಯೇ ಸ್ವಾತಿಯನ್ನು ನಯಾಜ್ ಟವೆಲ್ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಮೂವರೂ ಸೇರಿಕೊಂಡು ಮೃತದೇಹವನ್ನು ಢಿಕ್ಕಿಯಲ್ಲಿ ತೆಗೆದುಕೊಂಡು ಹೋಗಿ ತುಂಗಭದ್ರಾ ನದಿಗೆ ಎಸೆದಿದ್ದರು. ತುಂಗಭದ್ರಾ ನದಿಯಲ್ಲಿ ಅಪರಿಚಿತ ಶವ ನೋಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಪ್ರಕರಣ ಹೊರಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಎಸ್ ಟಿ ಕಡಿತದ ಬಗ್ಗೆ ಮೊನ್ನೆ ವಿರೋಧ, ಇಂದು ಹೊಗಳಿಕೆ: ಸಿದ್ದರಾಮಯ್ಯ ಸರ್ ಇದು ಹೆಂಗೆ ಎಂದ ನೆಟ್ಟಿಗರು

Karnataka Weather: ವಾರಂತ್ಯಕ್ಕೆ ಹೇಗಿರಲಿದೆ ರಾಜ್ಯದಲ್ಲಿ ಹವಾಮಾನ

ಇವಿಎಂ ಬದಲು ಬ್ಯಾಲೆಟ್ ಪೇಪರ್: ರಾಹುಲ್ ಗಾಂಧಿ ಬೇಡಿಕೆ ಕರ್ನಾಟಕ ಈಡೇರಿಸಿತು ಎಂದ ರಣದೀಪ್

ಜಿಎಸ್ ಟಿ ಬಗ್ಗೆ ಒಂದು ದಿನದ ಬಳಿಕ ಪ್ರತಿಕ್ರಿಯೆ: ಇದು ಮೋದಿ ಅಲ್ಲ ರಾಹುಲ್ ಗಾಂಧಿ ಸಾಧನೆ ಎಂದ ಸಿದ್ದರಾಮಯ್ಯ

ಮೋದಿ ಜನಪ್ರಿಯತೆ ಸಹಿಸದೇ ಕಾಂಗ್ರೆಸ್ ಹೀಗೆಲ್ಲಾ ಮಾಡ್ತಿದೆ: ಪಿ ರಾಜೀವ್

ಮುಂದಿನ ಸುದ್ದಿ
Show comments