Webdunia - Bharat's app for daily news and videos

Install App

ಅಂದು ಹುಸಿ ಭರವಸೆ ಕೊಟ್ಟು, ಡಿಕೆಶಿ ಇಂದು ಡಿಎಂಕೆ ತಾಳಕ್ಕೆ ತಕ್ಕಂತೆ ಕುಣಿತಾ ಇದ್ದಾರೆ

Sampriya
ಮಂಗಳವಾರ, 25 ಮಾರ್ಚ್ 2025 (21:09 IST)
Photo Courtesy X
ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಮೇಕೆದಾಟು ಅಣೆಕಟ್ಟೆ ಕಟ್ಟಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ನಾವು ಕಾನೂನು ಕ್ರಮಕ್ಕೂ ಹಿಂಜರಿಯುವುದಿಲ್ಲ ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ. ಈ ಬಗ್ಗೆ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿ ಜೆಡಿಎಸ್ ಪೋಸ್ಟ್ ಮಾಡಿದೆ.

ಜೆಡಿಎಸ್ ಹಂಚಿಕೊಂಡ ಪೋಸ್ಟ್‌ನಲ್ಲಿ ಹೀಗಿದೆ: ಕರ್ನಾಟಕ ರಾಜ್ಯಕ್ಕೆ ಮೇಕೆದಾಟು ಅಣೆಕಟ್ಟೆ ಕಟ್ಟಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ನಾವು ಕಾನೂನು ಕ್ರಮಕ್ಕೂ ಹಿಂಜರಿಯುವುದಿಲ್ಲ ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ.

ಮಿಸ್ಟರ್‌ ಡಿಕೆ ಶಿವಕುಮಾರ್‌, ಕಾಂಗ್ರೆಸ್ ಸರ್ಕಾರ  ಅಧಿಕಾರಕ್ಕೆ ಬಂದರೇ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುತ್ತೇವೆ ಎಂದು ಹುಸಿ ಭರವಸೆ ಕೊಟ್ಟು, ಈಗ ಡಿಎಂಕೆ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದೀರಿ.

ಚೆನ್ನೈಗೆ ತೆರಳಿ ತಮಿಳುನಾಡು ಸಿಎಂ ಸ್ಟಾಲಿನ್‌ ಜೊತೆ ಕೈ ಕುಲುಕಿ, ಶಾಲು ಹೊದ್ದಿಸಿಕೊಂಡು ಬಂದರೇ ಮೇಕೆದಾಟು ಡ್ಯಾಂ ನಿರ್ಮಾಣ ಸಾಧ್ಯವಿಲ್ಲ !  

ಮೇಕೆದಾಟು ಯೋಜನೆಗೆ ಸದಾ ಅಡ್ಡಗಾಲು ಹಾಕುತ್ತಿರುವ ಇಂಡಿ(INDI) ಮೈತ್ರಿಕೂಟದ ಮಿತ್ರಪಕ್ಷ ಡಿಎಂಕೆ ಸರ್ಕಾರವನ್ನು ಮೊದಲು ಒಪ್ಪಿಸುವ ತಾಕತ್ತು , ಎದೆಗಾರಿಕೆ ನಿಮ್ಮಲ್ಲಿ ಇದೆಯೇ ತೋರಿಸಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments