Webdunia - Bharat's app for daily news and videos

Install App

ಹುತಾತ್ಮ ಯೋಧನ ಮೃತ ದೇಹ ತುರ್ತಾಗಿ ಕಳುಹಿಸುವಂತೆ ಗೌಡರ ಮನವಿ

Webdunia
ಶನಿವಾರ, 28 ಜನವರಿ 2017 (14:54 IST)
ಗಣರಾಜ್ಯೋತ್ಸವ ಮುನ್ನಾದಿನ ಸೇನಾ ಕ್ಯಾಂಪ್ ಮೇಲೆ ಬಿದ್ದ ಭಾರಿ ಹಿಮಪಾತ, ಮೃತ ಯೋಧರಲ್ಲಿ ಹಾಸನ ಜಿಲ್ಲೆಯ ಸಂದೀಪ್ ಒಬ್ಬರು, ಶಾಂತಿಗ್ರಾಮ ಹೋಬಳಿ ದೇವಿಹಳ್ಳಿ ವೀರಯೋಧ ಸಂದೀಪ್ ಶೆಟ್ಟಿ(24). 
 
ಕುಟುಂಬದಲ್ಲಿ ಒಬ್ಬನೇ ಮಗನಾಗಿದ್ದ ಸಂದೀಪ್, ಮುಂದಿನ ತಿಂಗಳು 22 ರಂದು ಮದುವೆ ನಿಶ್ಚಯವಾಗಿತ್ತು, ಜಮ್ಮು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ ಬಳಿಯ ಸೇನಾ ಕ್ಯಾಂಪ್ ಮೇಲೆ ಹಿಮಪಾತವಾಗಿತ್ತು. 
 
ಪಾರ್ಥೀವ ಶರೀರ ತವರಿಗೆ ತರಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೇಂದ್ರದ ರಕ್ಷಣಾ ಸಚಿವರೊಂದಿಗೆ ದೂರವಾಣಿ ಯಲ್ಲಿ ಮಾತನಾಡಿ ಮೃತ ಯೋಧನ ದೇಹವನ್ನು ತುರ್ತಾಗಿ ಕಳುಹಿಸಿಕೊಡುವಂತೆ ಹಾಗೂ ಅವರ ಕುಟುಂಬಕ್ಕೆ ಎಲ್ಲಾ ರೀತಿಯ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿರುವ ತಮ್ಮ ಆಪ್ತ ಸಹಾಯಕರಿಗೆ ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳ ಸಂಪರ್ಕದಲ್ಲಿ ತಮಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.
 
ಕಂಬನಿ ಮಿಡಿದ ಸಚಿವರು: ಜಮ್ಮು ಕಾಶ್ಮೀರದ ಗುರೇಜ್ ನಲ್ಲಿ ನಡೆದ ಹಿಮಪಾತದಲ್ಲಿ ವೀರ ಮರಣವನ್ನಪ್ಪಿರುವ ಹಾಸನ ಜಿಲ್ಲೆಯ ಶಾಂತಿ ಗ್ರಾಮ ಹೋಬಳಿ ದೇವಿಹಳ್ಳಿ ಗ್ರಾಮದ ಸಂದೀಪ್ ಕುಮಾರ್ ಅವರ ನಿಧನಕ್ಕೆ ಜಿಲ್ಲಾ ಉಸ್ತವಾರಿ, ರೇಷ್ಮೆ ಮತ್ತು ಪಶು ಸಂಗೋಪನಾ ಸಚಿವರಾದ ಎ. ಮಂಜು ಅವರು ಕಂಬನಿ ಮಿಡಿದಿದ್ದಾರೆ. ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
 
ಇದೊಂದು ಅತ್ಯಂತ ದುಃಖದ ಸಂಗತಿ ದೇಶದ ಜನರ ಜೀವ ರಕ್ಷಣೆಗಾಗಿ ಭಾರತೀಯ ಸೇನೆಯಲ್ಲಿ ಹಗಲಿರುಳು ದುಡಿದು , ಪ್ರಕೃತಿ ಆಕಸ್ಮಿಕದಲ್ಲಿ ಹುತಾತ್ಮರಾದ ಸಂದೀಪ್ ಕುಮಾರ್ ಆತ್ಮಕ್ಕೆ ಚಿರ ಶಾಂತಿ ಸಿಗಲಿ ,ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಅವರು ಹೇಳಿದ್ದಾರೆ .
 
ಜಮ್ಮು-ಕಾಶ್ಮೀರದ ಗುರೆಜ್ ಪ್ರದೇಶದಲ್ಲಿ ಸಂಭವಿಸಿದ ಹಿಮಕುಸಿತದಲ್ಲಿ ಇನ್ಪೆಂಟ್ರಿ ರೆಜಿಮೆಂಟ್ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಸಂದೀಪ್ ಕುಮಾರ್ ಡಿ ವಿ (24) ಹುತಾತ್ಮರಾಗಿದ್ದಾರೆ. ರಾಜ್ಯದ ಹಾಸನ ಜಿಲ್ಲೆಯ ಶಾಂತಿಗ್ರಾಮದ ದೇವಿಹಳ್ಳಿಯವರಾದ ಸಂದೀಪ್ ಕುಮಾರ್ ಡಿ ವಿ ಅವರ ಪಾರ್ಥೀವ ಶರೀರ ಶನಿವಾರ ರಾಜ್ಯಕ್ಕೆ ಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments