Webdunia - Bharat's app for daily news and videos

Install App

ಜನಾರ್ಧನ ರೆಡ್ಡಿ ಮಗಳ ಅದ್ದೂರಿ ಮದುವೆ: ತನಿಖೆ ನಡೆಸಲು ಪ್ರಧಾನಿಗೆ ಪತ್ರ ಬರೆದ ಎಚ್.ಡಿ.ದೇವೇಗೌಡ

Webdunia
ಭಾನುವಾರ, 20 ನವೆಂಬರ್ 2016 (11:59 IST)
ಬೆಂಗಳೂರು: ಗಣಿ ದಣಿ ಜನಾರ್ಧನ ರೆಡ್ಡಿ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿಸಿದ್ದು ಎಲ್ಲರ ಹುಬ್ಬೇರಿಸಿತ್ತು.  500, 1000 ರೂ.ಗಳ ನೋಟು ನಿಷೇಧವಾಗಿ ದೇಶದಾದ್ಯಂತ ಹಣಕ್ಕಾಗಿ ಹಾಹಾಕಾರವಿದ್ದರೆ, ಬಿಜೆಪಿಯ  ಉಚ್ಛಾಟಿತ ನಾಯಕ ಜನಾರ್ಧನ ರೆಡ್ಡಿಗೆ ಹಣ ಎಲ್ಲಿಂದ ಬಂತು ತನಿಖೆ ನಡೆಸುವಂತೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಮದುವೆ ಕಾರ್ಯಕ್ರಮಗಳಿಗೆ ರೆಡ್ಡಿ ನೂರಾರು ಕೋಟಿ ರೂ. ಖರ್ಚು ಮಾಡಿದ್ದಾರೆಂದು ಸುದ್ದಿಯಾಗಿದೆ. ಅಷ್ಟು ಅದ್ದೂರಿಯಾಗಿ ಮಗಳ ಮದುವೆ ಮಾಡಲು ಅವರಿಗೆ ಎಲ್ಲಿಂದ ಹಣ ಬಂತು ಎಂದು ತನಿಖೆಯಾಗಬೇಕು. ಅಲ್ಲದೆ ಈ ಮದುವೆಯಲ್ಲಿ ನಿಮ್ಮ ಪಕ್ಷದ ನಾಯಕರೇ ಭಾಗವಹಿಸಿದ್ದಾರೆ ಎಂದು ಮೂರು ಪುಟಗಳ ಪತ್ರದಲ್ಲಿ ದೇವೇಗೌಡ ಒತ್ತಾಯಿಸಿದ್ದಾರೆ.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ರೆಡ್ಡಿ ಜೈಲು ಸೇರಿದ್ದರಲ್ಲದೆ, ಅವರ ಕೆಲವು ಆಸ್ತಿ ಪಾಸ್ತಿಗಳು ಮುಟ್ಟುಗೋಲು ಹಾಕಲಾಗಿತ್ತು. ಈ ಹಿನ್ನಲೆಯಲ್ಲಿ ಅವರ ಆದಾಯದ ಬಗ್ಗೆ ಸಂಸತ್ತಿನಲ್ಲೂ ವಿಪಕ್ಷಗಳು ಪ್ರಶ್ನಿಸಿದ್ದವು.  ಅಲ್ಲದೆ ಪತ್ರದಲ್ಲಿ ದೇವೇಗೌಡ ನೋಟು ನಿಷೇಧದ ಬಗ್ಗೆಯೂ ಅಸಮಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments