Webdunia - Bharat's app for daily news and videos

Install App

ರಾಮಲಿಂಗಾರೆಡ್ಡಿ ಜತೆ ದೇವೇಗೌಡರ ನಿವಾಸದಲ್ಲಿ ಭಾರೀ ಮೀಟಿಂಗ್! ಅತೃಪ್ತರ ಕರೆತರಲು ಕೊನೆಯ ಅಸ್ತ್ರ

Webdunia
ಶನಿವಾರ, 20 ಜುಲೈ 2019 (12:42 IST)
ಬೆಂಗಳೂರು: ಮುಂಬೈಗೆ ಹೋಗಿ ಕೂತಿರುವ ಅತೃಪ್ತರನ್ನು ಹೇಗಾದರೂ ಮಾಡಿ ಕರೆತರಬೇಕೆಂದು ಜೆಡಿಎಸ್ ಮತ್ತು ಕಾಂಗ್ರೆಸ್ ಶತ ಪ್ರಯತ್ನ ಮುಂದುವರಿಸಿದೆ.


ಸೋಮವಾರ ವಿಶ್ವಾಸಮತ ಯಾಚನೆ ವೇಳೆ ಸರ್ಕಾರಕ್ಕೆ ಸೋಲಾಗದಂತೆ ನೋಡಿಕೊಳ್ಳಲು ಅತೃಪ್ತ ಶಾಸಕರನ್ನು ಕರೆತರಲು ದೇವೇಗೌಡರ ನೇತೃತ್ವದಲ್ಲಿ ಪ್ರಯತ್ನ ನಡೆದಿದೆ. ಈ ಮೊದಲು ರಾಜೀನಾಮೆ ನೀಡಿ ನಂತರ ವಾಪಸ್ ಪಡೆದ ರಾಮಲಿಂಗಾರೆಡ್ಡಿ ಜತೆ ದೇವೇಗೌಡರು ತಮ್ಮ ನಿವಾಸದಲ್ಲಿ ಭಾರೀ ಚರ್ಚೆ ನಡೆಸಿದ್ದಾರೆ.

ರಾಮಲಿಂಗಾ ರೆಡ್ಡಿ ಮೂಲಕ ಅತೃಪ್ತರನ್ನು ಕರೆತರಲು ಪ್ರಯತ್ನ ಮುಂದುವರಿದಿದೆ ಎನ್ನಲಾಗಿದೆ. ರಾಮಲಿಂಗಾ ರೆಡ್ಡಿ ಕರೆದರೆ ಈ ಅತೃಪ್ತ ಶಾಸಕರು ಮರಳಿಬರಬಹುದು ಎಂಬ ವಿಶ್ವಾಸ ನಾಯಕರದ್ದು. ಅದಕ್ಕಾಗಿ ದೇವೇಗೌಡರ ನಿವಾಸದಲ್ಲಿ ಸಿಎಂ ಕುಮಾರಸ್ವಾಮಿ ಕೂಡಾ ಉಪಸ್ಥಿತರಿದ್ದು ಮಹತ್ವದ ಚರ್ಚೆ ನಡೆಸಿದ್ದಾರೆ. ವಿಶ್ವಾಸ ಮತ ಯಾಚನೆಗೆ ಎರಡು ದಿನದ ಅವಧಿ ಸಿಕ್ಕಿದ್ದು, ಮನ ಒಲಿಕೆ, ಸಂಧಾನಕ್ಕೆ ಫಲ ಸಿಗಬಹುದಾ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments