Webdunia - Bharat's app for daily news and videos

Install App

ಮೊದಲ ಬಾರಿಗೆ ಮೊಮ್ಮಗ ಪ್ರಜ್ವಲ್ ರೇವಣ್ಣ ಬಗ್ಗೆ ಪ್ರತಿಕ್ರಿಯಿಸಿದ ಎಚ್ ಡಿ ದೇವೇಗೌಡ

Krishnaveni K
ಶನಿವಾರ, 18 ಮೇ 2024 (12:49 IST)
ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಇಂದು ಜನ್ಮದಿನದ ಸಂಭ್ರಮ. ಆದರೆ ಈ ಬಾರಿ ತಮ್ಮ ಕುಟುಂಬದ ಮೇಲೆ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪದಿಂದ ಬೇಸತ್ತಿರುವ ಅವರು ಹುಟ್ಟುಹಬ್ಬ ಆಚರಿಸದೇ ಇರಲು ತೀರ್ಮಾನಿಸಿದ್ದಾರೆ.

ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಸಿಲುಕಿಕೊಂಡಿರುವುದು ದೇವೇಗೌಡರ ಬೇಸರಕ್ಕೆ ಕಾರಣವಾಗಿದೆ. ಹೀಗಾಗಿ ಈ ಆರೋಪ ಬಂದಾಗಿನಿಂದ ಅವರು ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಅವರು ಮಾಧ‍್ಯಮಗಳ ಮುಂದೆ ಬಂದಿದ್ದಾರೆ.

 ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ದೇವೇಗೌಡರು ‘ಈ ಪ್ರಕರಣದಲ್ಲಿ ಶಾಮೀಲಾಗಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಾನು ಯಾರ ಹೆಸರನ್ನೂ ಪ್ರತ್ಯೇಕವಾಗಿ ಹೇಳಲ್ಲ’ ಎಂದಿದ್ದಾರೆ.  ‘ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ. ಆದರೆ ರೇವಣ್ಣ ಅವರ ವಿಚಾರದಲ್ಲಿ ನಿಮಗೇ ಗೊತ್ತಿರುವ ಹಾಗೆ ಅವರ ವಿರುದ್ಧ ಏನಾಗುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಈಗಾಗಲೇ ಒಂದು ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಕ್ಕಿದೆ, ಇನ್ನೊಂದು ಜಾಮೀನು ಆದೇಶ ಬಾಕಿಯಿದೆ’ ಎಂದಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಜೊತೆಗೆ ಅತ್ಯಾಚಾರ ಪ್ರಕರಣವೂ ದಾಖಲಾಗಿದೆ. ಆದರೆ ಇದುವರೆಗೆ ಪ್ರಜ್ವಲ್ ಭಾರತಕ್ಕೆ ಬಾರದೇ ತನಿಖಾಧಿಕಾರಿಗಳಿಂದ ನುಣುಚಿಕೊಳ್ಳುತ್ತಿದ್ದಾರೆ. ಇತ್ತ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಕೇಸ್ ನಲ್ಲಿ ಷಡ್ಯಂತ್ರವಿದೆ ಎಂದು ನನಗೆ ಮೊದಲೇ ಗೊತ್ತಿತ್ತು: ಡಿಕೆಶಿ ಶಾಕಿಂಗ್ ಹೇಳಿಕೆ

ಧರ್ಮಸ್ಥಳದ ಬಗ್ಗೆ ಒಂದಾದ ಮೇಲೊಂದು ವಿಡಿಯೋ ಮಾಡಿದ್ದ ಸಮೀರ್ ಗೆ ಬಲೆ ಬೀಸಿದ ಪೊಲೀಸರು

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಶುಗರ್ ಲೆವೆಲ್ 200 ರ ಒಳಗಿದ್ದರೆ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಬಿಎಂ ಹೆಗ್ಡೆ ನೀಡಿದ್ದ ಸಲಹೆಯಿದು

ಸುಜಾತ ಭಟ್ ಉಲ್ಟಾ ಹೊಡೆಯುತ್ತಿದ್ದಂತೇ ಶಾಕಿಂಗ್ ಹೇಳಿಕೆ ನೀಡಿದ ಗಿರೀಶ್ ಮಟ್ಟೆಣ್ಣನವರ್

ಮುಂದಿನ ಸುದ್ದಿ