Webdunia - Bharat's app for daily news and videos

Install App

‘ಕುಮಾರ’ನ ಪಟ್ಟಾಭಿಷೇಕಕ್ಕೆ ಮೊದಲು ದೇವೇಗೌಡರು ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 23 ಮೇ 2018 (10:38 IST)
ಬೆಂಗಳೂರು: ಮಗ ಮುಖ್ಯಮಂತ್ರಿಯಾಗುತ್ತಿದ್ದಾನೆಂದರೆ ಯಾರಿಗೆ ತಾನೇ ಖುಷಿಯಿರುವುದಿಲ್ಲ ಹೇಳಿ? ಸ್ವತಃ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೂ ಅದೇ ಆಗಿದೆ.

ಫಲಿತಾಂಶ ಬಂದ ದಿನದಿಂದಲೂ ದೇವರ ಮೊರೆ ಹೋಗಿರುವ ಎಚ್ ಡಿ ದೇವೇಗೌಡ ನಿನ್ನೆ ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ಪುತ್ರರ ಜತೆ ಶೃಂಗೇರಿಗೆ ಭೇಟಿ ನೀಡಿದ್ದರು.

ಇಂದು ಮಗ ಕುಮಾರಸ್ವಾಮಿ ಪ್ರಮಾಣ ವಚನಕ್ಕೂ ಮೊದಲೂ ದೇವೇಗೌಡರು ಪೂಜೆಯಲ್ಲಿ ನಿರತರಾಗಿದ್ದಾರೆ. ಬೆಳಿಗ್ಗೆಯೇ ಜ್ಯೋತಿಷಿ ಜಯನಗರದ ಸಂಪತ್ ರವಿನಾರಾಯಣ ಮನೆಗೆ ಭೇಟಿ ನೀಡಿದ ದೊಡ್ಡ ಗೌಡರು ಪೂಜೆ ನೆರವೇರಿಸಿದ್ದಾರೆ. ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಪುತ್ರ ಸಿಎಂ ಆಗುವುದನ್ನು ಕಣ್ಣಾರೆ ನೋಡಲಿದ್ದಾರೆ.

ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ತೃತೀಯ ರಂಗ ಸಿದ್ಧಪಡಿಸುವ ಬಗ್ಗೆ ಈಗಲೇ ಏನನ್ನೂ ಹೇಳಲಾಗದು ಎಂದು ಹೇಳಿದ್ದಾರೆ. ಇಂದು ಬಿಜೆಪಿ ವಿರೋಧಿ ಪಕ್ಷಗಳ ನಾಯಕರೆಲ್ಲರೂ ಕುಮಾರಸ್ವಾಮಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ದೇವೇಗೌಡರು ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments