Webdunia - Bharat's app for daily news and videos

Install App

ರಾಜ್ಯಸಭೆ ಟಿಕೆಟ್ ಕೈ ತಪ್ಪಿದ ಬಳಿಕ ಮೋದಿ ಬಗ್ಗೆ ದೇವೇಗೌಡ ಹೇಳಿಕೆಗೆ ಎದುರಾಳಿಗಳು ಶಾಕ್

ಕೃಷ್ಣವೇಣಿ ಕೆ
ಬುಧವಾರ, 10 ಜೂನ್ 2026 (16:15 IST)
ಬೆಂಗಳೂರು: ರಾಜ್ಯಸಭೆ ಟಿಕೆಟ್ ಕೈತಪ್ಪಿದ  ಬಳಿಕ ಮೊದಲ ಬಾರಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆಗೆ ಎದುರಾಳಿಗಳೇ ಶಾಕ್ ಆಗಿದ್ದಾರೆ.

ರಾಜ್ಯಸಭೆಗೆ ಬಿಜೆಪಿ ಇತ್ತೀಚೆಗೆ ಟಿಕೆಟ್ ಘೋಷಣೆ ಮಾಡಿತ್ತು. ಆದರೆ ಈ ಪಟ್ಟಿಯಲ್ಲಿ ದೋಸ್ತಿ ಪಕ್ಷ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಹೆಸರಿರಲಿಲ್ಲ. ಈ ಕುರಿತಾಗಿ ಕಾಂಗ್ರೆಸ್ ಟೀಕೆ ಮಾಡಿತ್ತು.  ಹಿರಿಯ ನಾಯಕನನ್ನು ಬಿಜೆಪಿ ಕಡೆಗಣಿಸಿದೆ ಎಂದು ಟೀಕೆ ಮಾಡಿತ್ತು.

ಇಂದು ಪತ್ರಿಕಾಗೋಷ್ಠಿ ನಡೆಸಿದ ದೇವೇಗೌಡರು ಟೀಕೆಗಳಿಗೆಲ್ಲಾ ಉತ್ತರ ನೀಡಿದ್ದಾರೆ. ‘ಒಂದು ರಾಜ್ಯಸಭೆ ಟಿಕೆಟ್ ನಿಂದ ನನ್ನ ಮೋದಿ ಸಂಬಂಧ ನಿರ್ಧಾರವಾಗಲ್ಲ. ನನ್ನ ಅವರ ಸಮಬಂಧ ನನ್ನ ಅಂತಿಮ ಕಾಲದವರೆಗೂ ಇರುತ್ತದೆ. ಎನ್ ಡಿಎ ಜೊತೆ ನಾವು ಮೈತ್ರಿ ಮುಂದುವರಿಸುತ್ತೇವೆ. ನನಗೆ ರಾಜ್ಯಸಭೆಯಲ್ಲಿ ಮುಂದುವರಿಯಬೇಕು ಎಂದಿದ್ದರೆ ನಾನೇ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದೆ. ಆದರೆ ನಾನು ಯಾವತ್ತೂ ಟಿಕೆಟ್ ಗಾಗಿ ಬೇಡಿಕೆಯಿಟ್ಟಿಲ್ಲ.

ವಿದೇಶದಲ್ಲೂ ಮೋದಿಗೆ ತುಂಬಾ ಗೌರವವಿದೆ. ಆ ರೀತಿ ವಿದೇಶದಲ್ಲೂ ಬೆಳೆದ ವ್ಯಕ್ತಿ ಬೇರೆ ಯಾರೂ ಇಲ್ಲ. ನನಗೆ ಮೋದಿ ಜೊತೆ ವೈಯಕ್ತಿಕವಾದ ಸಂಬಂಧವಿದೆ. ರಾಜ್ಯಸಭೆ ಸದಸ್ಯನಾಗದೇ ಇದ್ದರೂ ರಾಜ್ಯದ ಸಮಸ್ಯೆಯಿದ್ದರೆ ಪತ್ರ ಬರೆಯುತ್ತೇನೆ ಇಲ್ಲವೇ ಭೇಟಿ ಮಾಡುತ್ತೇನೆ. ನನ್ನ ಕೊನೆಯವರೆಗೂ ಈ ಸಂಬಂಧ ಹೀಗೇ ಇರುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ಮುಂದಿನ ಈ ಭಾಗದಲ್ಲಿ ಭಾರೀ ಮಳೆ, ಯೆಲ್ಲೂ ಅಲರ್ಟ್‌ ಘೋಷಿಸಿದ ಜಿಲ್ಲೆಗಳ ಮಾಹಿತಿ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments