Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ನಗುತ್ತಲೇ ಟಾಂಗ್ ಕೊಟ್ಟ ಎಚ್ ಡಿ ದೇವೇಗೌಡರು

Webdunia
ಮಂಗಳವಾರ, 28 ಆಗಸ್ಟ್ 2018 (08:21 IST)
ಬೆಂಗಳೂರು: ಮತ್ತೆ ಸಿಎಂ ಆಗುವೆ ಎಂದು ಹೇಳಿಕೆ ನೀಡಿದ ಮೈತ್ರಿ ಸರ್ಕಾರದೊಳಗೆ ತಲ್ಲಣ ಮೂಡಿಸಿದ್ದ ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಟಾಂಗ್ ಕೊಟ್ಟಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರು ಸಮನ್ವಯ ಸಮಿತಿ ಬಗ್ಗೆ ಪ್ರಶ್ನಿಸಿದಾಗ ನಗುತ್ತಲೇ ಉತ್ತರಿಸಿದ ದೇವೇಗೌಡರು ಸಮನ್ವಯ ಸಮಿತಿ ಎಂದರೇನು? ಅದರ ಜವಾಬ್ಧಾರಿ ಎಂದರೇನು ಎಂದು ನಾಯಕರೇ ಉತ್ತರಿಸಬೇಕು ಎನ್ನುವ ಮೂಲಕ ಸಿದ್ದರಾಮಯ್ಯಗೆ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ.

ಇನ್ನು, ಕೊಡಗು ಪ್ರವಾಹದಿಂದ ಆದ ನಷ್ಟ ಪರಿಹಾರಕ್ಕೆ ಶೀಘ್ರವೇ ರಾಜ್ಯ ಸರ್ಕಾರದ ನಿಯೋಗ ದೆಹಲಿಗೆ ತೆರಳಲಿದ್ದು, ಅವರ ಜತೆ ನಾನೂ ಮಾಜಿ ಪ್ರಧಾನಿ ಎಂಬ ಪ್ರತಿಷ್ಠೆ ಮರೆತು ಹೋಗುವೆ. ಕೇಂದ್ರಕ್ಕೆ ಕೊಡಗಿನಲ್ಲಿ ಆದ ನಷ್ಟದ ಅಂಕಿ ಅಂಶ ನೀಡಿ ಮನವರಿಕೆ ಮಾಡುವೆ ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments