Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪಗೆ ದೇವೇಗೌಡರ ಶುಭಾಷಯದ ಹಿಂದಿದೆಯಾ ದೊಡ್ಡ ಲೆಕ್ಕಾಚಾರ?!

Webdunia
ಶನಿವಾರ, 27 ಜುಲೈ 2019 (11:30 IST)
ಬೆಂಗಳೂರು: ಬಿಎಸ್ ಯಡಿಯೂರಪ್ಪ ನೂತನ ಸಿಎಂ ಆಗಿ ಪದಗ್ರಹಣ ಮಾಡಿದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಶುಭಾಷಯ ಕೋರಿ ಎಲ್ಲರನ್ನೂ ಅಚ್ಚರಿಯಲ್ಲಿ ಕೆಡವಿದ್ದರು.


ಇಷ್ಟು ದಿನ ಕಾಂಗ್ರೆಸ್ ಜತೆ ಮೈತ್ರಿ ಸರ್ಕಾರದ ಪಾಲುದಾರನಾಗಿ ಇದೀಗ ಜೆಡಿಎಸ್ ಬಿಜೆಪಿ ಪರ ವಾಲಿರುವುದು ಯಾಕೆ ಎಂದು ಹಲವರು ಅಚ್ಚರಿಗೊಳಗಾಗಿದ್ದರು.

ಖಾಸಗಿ ಮಾಧ್ಯಮವೊಂದರ ವರದಿ ಪ್ರಕಾರ ಈ ಹಿಂದೆ ಅತೃಪ್ತರು ಬಂಡಾಯವೆದ್ದು ಮುಂಬೈಗೆ ಹೋದ ಸಂದರ್ಭದಲ್ಲಿ ದೇವೇಗೌಡರು ಸೋನಿಯಾ ಗಾಂಧಿ ಬಳಿ ನಿಮ್ಮವರೇ ಸಿಎಂ ಆಗಲಿ, ನಾವು ಬಾಹ್ಯ ಬೆಂಬಲ ಕೊಡುತ್ತೇವೆ. ಮುಂಬೈಗೆ ಹೋದವರನ್ನು ಕರೆಸಿ ಎಂದಿದ್ದರಂತೆ. ಆದರೆ ಸೋನಿಯಾ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರು ಇದಕ್ಕೆ ಸೊಪ್ಪು ಹಾಕದೇ ಇದ್ದಿದ್ದು ದೇವೇಗೌಡರ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ.

ಅದೇ ಸಿಟ್ಟಿನಿಂದಲೇ ದೇವೇಗೌಡರು ಈಗ ಬಿಜೆಪಿಗೆ ಬಾಹ್ಯ ಬೆಂಬಲ ಕೊಡುವ ರಾಜಕೀಯ ಲೆಕ್ಕಾಚಾರ ಹಾಕಿದ್ದಾರೆ ಎಂದು ವರದಿಯಾಗಿದೆ. ಆದರೆ ಬಿಜೆಪಿ ಮಾತ್ರ ನಮಗೆ ಜೆಡಿಎಸ್ ಬೆಂಬಲ ಬೇಕಿಲ್ಲ ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments