Webdunia - Bharat's app for daily news and videos

Install App

ಎಚ್ ಡಿ ಕುಮಾರಸ್ವಾಮಿ ವಿರುದ್ಧ 50 ಕೋಟಿಗೆ ಬೇಡಿಕೆ ಆರೋಪ: ಉದ್ಯಮಿಯಿಂದ ದೂರು

Krishnaveni K
ಗುರುವಾರ, 3 ಅಕ್ಟೋಬರ್ 2024 (10:40 IST)
ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್ ಡಿ ಕುಮಾರಸ್ವಾಮಿ 50 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ವಿಜಯ್ ಟಾಟಾ ಎಂಬವರು ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿಯಾಗಿರು ವಿಜಯ್ ಟಾಟಾ ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ಕುಮಾರಸ್ವಾಮಿ ಮತ್ತು ಜೆಡಿಎಸ್ ಮುಖಂಡ ರಮೇಶ್ ಬಾಬು ವಿರುದ್ಧ ದೂರು ನೀಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಉಪಚುನಾವಣೆಗೆ ನಿಲ್ಲುತ್ತಾರೆ. ಚುನಾವಣೆಗಾಗಿ 50 ಕೋಟಿ ರೂ. ನೀಡುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದರು. ಆದರೆ ಹಣ ಕೊಡದೇ ಇದ್ದರೆ ಪ್ರಾಜೆಕ್ಟ್ ಕಂಪ್ಲೀಟ್ ಮಾಡಲು ಬಿಡಲ್ಲ ಎಂದು ಬೆದರಿಕೆ ಹಾಕಿದ್ದರು ಎಂದು ವಿಜಯ್ ಟಾಟಾ ದೂರಿನಲ್ಲಿ ತಿಳಿಸಿದ್ದಾರೆ.

ದೇವಸ್ಥಾನ ಕಟ್ಟಲು 5 ಕೋಟಿ ರೂ. ಕೊಡಿ ಎಂದು ರಮೇಶ್ ಬಾಬು ಕೇಳಿದ್ದರು. ಆದರೆ ನನಗೆ ಕಷ್ಟವಿದೆ ಕೊಡಲ್ಲ ಎಂದಿದ್ದೆ. ಅದಾದ ಬಳಿಕ ರಮೇಶ್ ಬಾಬು ಸಾಕಷ್ಟು ಬಾರಿ ಮೆಸೇಜ್ ಮಾಡಿದ್ದರು. 2019 ರ ಚುನಾವಣೆಯಲ್ಲೂ ಅವರಿಗಾಗಿ ಸಾಕಷ್ಟು ಖರ್ಚು ಮಾಡಿದ್ದೆವು ಎಂದು ವಿಜಯ್ ಟಾಟಾ ದೂರಿದ್ದಾರೆ.

ಇದೀಗ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ಮುಗಿಬಿದ್ದಿರುವ ಕುಮಾರಸ್ವಾಮಿಗೆ ಈ ಪ್ರಕರಣ ಕೌಂಟರ್ ಆಗುವ ನಿರೀಕ್ಷೆಯಿದೆ. ಇದನ್ನೇ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅಸ್ತ್ರವಾಗಿ ಬಳಸಿಕೊಳ್ಳಲಿದೆ. ಈ ಬಗ್ಗೆ ಕುಮಾರಸ್ವಾಮಿ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments