Webdunia - Bharat's app for daily news and videos

Install App

ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಡಿಕೆ ಶಿವಕುಮಾರ್ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ: ಎಚ್ ಡಿ ಕುಮಾರಸ್ವಾಮಿ

Krishnaveni K
ಸೋಮವಾರ, 15 ಏಪ್ರಿಲ್ 2024 (16:33 IST)
ಬೆಂಗಳೂರು: ತಮ್ಮ ಮೇಲೆ ಮಹಿಳೆಯರಿಗೆ ಅವಮಾನ ಮಾಡಿದ ಆರೋಪ ಬಂದ ಹಿನ್ನಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ವಿಷಾಧ ವ್ಯಕ್ತಪಡಿಸಿದ ಮಾಜಿ ಸಿಎಂ, ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ನಾಯಕ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಕೆಲವು ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಆಸ್ತಿ ಗಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಕೆಶಿಗೆ ನನಗೆ ಬಿಡದಿಯಲ್ಲಿರುವುದು ಜಮೀನು ಮಾತ್ರ. ಆದರೆ ಡಿಕೆಶಿ ಎಷ್ಟು ಆಸ್ತಿ ಕಬಳಿಕೆ ಮಾಡಿಕೊಂಡಿದ್ದಾರೆ ಹೇಳಲಿ ಎಂದಿದ್ದಾರೆ.

ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಡಿಕೆಶಿ ಬೆದರಿಕೆ ಆರೋಪ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಪಾರ್ಟ್ಮೆಂಟ್ ನಿವಾಸಿಗಳನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
 
 
ಹೊಸ ಅಪಾರ್ಟ್ಮೆಂಟ್ ಅಕ್ಯೂಪೆನ್ಸಿ ಸರ್ಟಿಫಿಕೇಟ್ ಬೇಕಾದರೆ, NOC ಬೇಕಾದರೆ ನನ್ನ ತಮ್ಮನಿಗೆ ಮತ ಹಾಕಿ ಎಂದು ಬ್ಲಾಕ್ ಮೇಲ್ ಮಾಡಿದ್ದಾರೆ. ವೋಟು ಕೊಟ್ಟರೆ  ಕಾವೇರಿ ನೀರು ಬಿಡ್ತೀನಿ ಎಂದು ಧಮ್ಕಿ ಹಾಕಿದ್ದಾರೆ ಎಂದು ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಮೇಲೆ ಆರೋಪ ಮಾಡಿದರು.
 
ನನಗೆ ಇರುವುದು ಬಿಡದಿ ಬಳಿ ಜಮೀನು ಮಾತ್ರ; ಡಿಕೆಶಿ ಯಾವ ಕಷ್ಟಪಟ್ಟು ಇಷ್ಟು ಆಸ್ತಿ ಸಂಪಾದಿಸಿದ್ದಾರೆ?
 
ಬೆಂಗಳೂರಿನ ಸುತ್ತಮುತ್ತ 1000 ಎಕರೆ ಕುಮಾರಸ್ವಾಮಿಗೆ ಜಮೀನು ಇದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿಗಳು; ಹೌದು.. ನನ್ನದು ಬಿಡದಿಯ ಬಳಿ 45-48 ಎಕರೆ ಭೂಮಿ ಇದೆ. ಸಿನಿಮಾದಲ್ಲಿ ದುಡಿದ ದುಡ್ಡಿನಲ್ಲಿ ಅದನ್ನು ಖರೀದಿ ಮಾಡಿದ್ದು. ರಾಜಕೀಯಕ್ಕೆ ಬರುವುದಕ್ಕೆ ಮೊದಲೇ ಈ ಜಾಮೀನು ಖರೀದಿ ಮಾಡಿದ್ದೇನೆ. ನಾನು ತೋಟದಲ್ಲಿ ರೆಸಾರ್ಟ್ ಮಾಡಿಲ್ಲ. ಬಂದು ನೋಡಪ್ಪ. ಕಲ್ಲಂಗಡಿ, ಬಾಳೆ, ಕೊಬ್ಬರಿ ಬೆಳೆದಿದ್ದೇನೆ. ಎಲ್ಲಾ ವಿಡಿಯೋ ಇದೆಯಪ್ಪ. ದೇವೇಗೌಡರು ವಿರೋಧ ಪಕ್ಷದಲ್ಲಿ ಇದ್ದಾಗಲೂ ನಿಕ್ಕರ್ ಹಾಕಿಕೊಂಡು ಶನಿವಾರ, ಭಾನುವಾರ ತೋಟದ ಕೆಲಸ ಮಾಡುತ್ತಿದ್ದರು ಎಂದರು.
 
 
ಡಿ.ಕೆ.ಶಿವಕುಮಾರ್ ಯಾವ ಕಷ್ಟಪಟ್ಟು ಆಸ್ತಿ ಸಂಪಾದನೆ ಮಾಡಿದ್ದಾರೆ? ಕಲ್ಲು ಬಂಡೆ ಕದ್ದು ವಿದೇಶಕ್ಕೆ ಸಾಗಿಸಿರೋದೇ ಅವರ ಕೆಲಸ. ಹೇಳಿದರೆ ಆ ವ್ಯಕ್ತಿಯ ಬಗ್ಗೆ ಕಂತೆ ಕಂತೆ ಹೇಳಬಹುದು. ಅವರಿಗೆ ನನ್ನದೇ ಆಪತ್ತು. ಅದಕ್ಕೆ ನನ್ನ ವಿರುದ್ದ ಮಾತಾಡ್ತಿದ್ದಾರೆ. 8 ಒಕ್ಕಲಿಗರಿಗೆ ಸೀಟು ಕೊಟ್ಟಿದ್ದೀನಿ ಅಂತಾರೆ. ಕೊಟ್ಟು ಏನ್ ಆಯ್ತು. ಸಿಎಂ ಆಗೋ ಅವಕಾಶ ಇದೆ, ಆಶೀರ್ವಾದ ಮಾಡಿ ಅಂದರು. ಈಗ ಒಂದು ಸಾರಿ ಪೇಪರು ಪೆನ್ನು ಕೊಟ್ಟು ತಮಿಳುನಾಡಿಗೆ ನೀರು ಹೋಗ್ತಿಲ್ಲವಾ? ಈಗ ಮತ್ತೆ ಪೆನ್ನು ಪೇಪರ್ ಕೊಡಬೇಕಾ? ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.
 
ಮಹಿಳಾ ಆಯೋಗ ದೂರು ದಾಖಲು ಮಾಡಿಕೊಂಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ; ಮಹಿಳಾ ಆಯೋಗ ನೊಟೀಸ್ ಕೊಡಲಿ ಉತ್ತರ ಕೊಡ್ತೀನಿ ಎಂದು ಉತ್ತರಿಸಿದರು.
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments