ಮುಡಾ ಹಗರಣ ಹೊರಹಾಕಿದ್ದ ಕಾಂಗ್ರೆಸ್ ಅಧ್ಯಕ್ಷರೇ: ಡಿಕೆಶಿ ವಿರುದ್ಧ ಕುಮಾರಸ್ವಾಮಿ ಆರೋಪ

Krishnaveni K
ಶುಕ್ರವಾರ, 5 ಜುಲೈ 2024 (12:19 IST)
ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ಕುರಿತಂತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪರೋಕ್ಷವಾಗಿ ಡಿಕೆ ಶಿವಕುಮಾರ್ ಗೆ ತಿವಿದಿದ್ದಾರೆ.
 

ಇಷ್ಟು ದಿನ ಸಿಡಿ ಫ್ಯಾಕ್ಟರಿ ನಡೆಯುತ್ತಿತ್ತು, ಇದೀಗ ಮುಡಾ ಫ್ಯಾಕ್ಟರಿ ಶುರುವಾಗಿದೆ. ಇದೆಲ್ಲದರ ರೂವಾರಿ ಅವರ ಪಕ್ಷದ ಅಧ್ಯಕ್ಷರೇ ಎಂದು ಡಿಕೆ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಎಲ್ಲವೂ ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣ ಮುಳುವಾಗಿದೆ.

ತಮ್ಮ ಮೇಲೆ ಬೆಂಬಲಿಗರನ್ನು ಛೂ ಬಿಟ್ಟು ಕತ್ತಿ ಮಸೆಯುತ್ತಿದ್ದ ಸಿದ್ದರಾಮಯ್ಯ ವಿರುದ್ಧ ಡಿಕೆ ಶಿವಕುಮಾರ್ ಅವರೇ ಈ ಕೆಲಸ ಮಾಡಿಸಿದ್ದಾರೆ ಎಂದು ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ. ಇಲ್ಲ ಅಂದರೆ ಇಷ್ಟು ದಿನ ಹೊರಬಾರದ ಹಗರಣ ಈಗ ಹೊರ ಬರಲು ಕಾರಣವೇನು ಎಂದು ಅವರು ಚುಚ್ಚಿದ್ದಾರೆ.

ಬಿಜೆಪಿಯವರು ಹಗರಣದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಆದರೆ ಈ ಹಗರಣ ಹೊರಬೀಳಲು ಕಾಂಗ್ರೆಸ್ ನವರದ್ದೇ ಕುಮ್ಮಕ್ಕು ಇದೆ. ಈ ಬಗ್ಗೆ ನನಗೆ ಮಾಹಿತಿಯಿದೆ. ಸಿದ್ದರಾಮಯ್ಯಗೆ ಸೈಟು ಹೇಗೆ ಬಂತು ಎಂದು ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೊಡಿ ಎನ್ನುತ್ತಿರುವ ಸಿದ್ದರಾಮಯ್ಯ ಮೊದಲು ಭೂಮಿ ಕಳೆದುಕೊಂಡಿರುವ ರೈತರಿಗೆ ಪರಿಹಾರ ಕೊಡಿಸಲಿ ಎಂದು ಕುಮಾರಸ್ವಾಮು ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಕಾಕ್ರೋಚ್ ಪಕ್ಷದ ಎಕ್ಸ್‌ ಖಾತೆ ಮರುಸ್ಥಾಪನೆಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಅಭಿಜೀತ್ ದಿಪ್ಕೆಗೆ ಹಿನ್ನಡೆ

ಇಂದು ರಾಹುಲ್ ಗಾಂಧಿ ಭೇಟಿ ವೇಳೆ ಮಗನಿಗಾಗಿ ಡಿಮ್ಯಾಂಡ್ ಇಟ್ರಾ ಸಿದ್ದರಾಮಯ್ಯ

ಡಿಕೆ ಶಿವಕುಮಾರ್ ಗೆ ಅದೃಷ್ಟ ತಂದಿರೋದು ಬೇರೆ ಯಾರೂ ಅಲ್ಲ ಅವಳೇ..

ಮುಂದಿನ ಸುದ್ದಿ
Show comments