Webdunia - Bharat's app for daily news and videos

Install App

ಮಗ ನಿಖಿಲ್ ಕುಮಾರಸ್ವಾಮಿಗೆ ಪಟ್ಟು ಕಟ್ಟ ಹೊರಟ ಎಚ್ ಡಿ ಕುಮಾರಸ್ವಾಮಿಗೆ ಆರಂಭದಲ್ಲೇ ವಿಘ್ನ

Krishnaveni K
ಗುರುವಾರ, 2 ಜನವರಿ 2025 (16:00 IST)
ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯಾಧ್ಯ್ಷಕ ಸ್ಥಾನಕ್ಕೆ ತಮ್ಮ ಬಳಿಕ ಮಗ ನಿಖಿಲ್ ಕುಮಾರಸ್ವಾಮಿಗೆ ಪಟ್ಟ ಕಟ್ಟಲು ಹೊರಟಿದ್ದ ಎಚ್ ಡಿ ಕುಮಾರಸ್ವಾಮಿಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.

ನಿಖಿಲ್ ಕುಮಾರಸ್ವಾಮಿ ಮೂರು ಬಾರಿ ಚುನಾವಣೆಗೆ ಸ್ಪರ್ಧಿಸಿ ಮೂರೂ ಬಾರಿಯೂ ಸೋತಿದ್ದರು. ಅಲ್ಲದೆ, ರಾಜಕೀಯವಾಗಿ ಹೆಚ್ಚು ಅನುಭವವಿಲ್ಲ. ಹಾಗಿದ್ದರೂ ಕುಮಾರಸ್ವಾಮಿ ತಮ್ಮ ಪುತ್ರನಿಗೇ ರಾಜ್ಯದ ಜೆಡಿಎಸ್ ಚುಕ್ಕಾಣಿ ನೀಡುವ ಹವಣಿಕೆಯಲ್ಲಿದ್ದರು.

ಆದರೆ ನಿಖಿಲ್ ಗೆ ಪಟ್ಟ ಕಟ್ಟುವುದಕ್ಕೆ ಜೆಡಿಎಸ್ ನ ಹಿರಿಯ ನಾಯಕರಿಂದಲೇ ಅಸಮಾಧಾನ ವ್ಯಕ್ತವಾಗಿದೆ ಎನ್ನಲಾಗುತ್ತಿದೆ. ನಿಖಿಲ್ ಇನ್ನೂ ಎಳಸು. ಆತನ ಕೈ ಕೆಳಗೆ ಕೆಲಸ ಮಾಡಲು ಇಷ್ಟವಿಲ್ಲ ಎಂದು ಹಿರಿಯ ನಾಯಕರು ಅಸಮಾಧಾನ ಹೊರಹಾಕಿದ್ದಾರೆ.

ಅದರ ಬದಲಿಗೆ ಈಗ ಅಸಮಾಧಾನಗೊಂಡಿರುವ ಹಿರಿಯ ನಾಯಕ ಜಿಟಿ ದೇವೇಗೌಡಗೆ ಶಾಸಕಾಂಗ ಪಕ್ಷದ ನಾಯಕ ಸ್ಥಾನ ನೀಡಿ ಬಂಡೆಪ್ಪ ಕಾಶಂಪೂರ್ ಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂಬ ಬೇಡಿಕೆ ಕೇಳಿಬಂದಿದೆ. ಅಲ್ಲದೆ ಮೊದಲೇ ಜೆಡಿಎಸ್ ಗೆ ಕುಟುಂಬ ರಾಜಕಾರಣದ ಹಣೆ ಪಟ್ಟಿಯಿದೆ. ಈಗ ನಿಖಿಲ್ ಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಅದೇ ವಿಚಾರ ಮತ್ತೆ ಮುನ್ನಲೆಗೆ ಬರಲಿದೆ. ಮುಂದಿನ ಚುನಾವಣೆಯನ್ನು ಎದುರಿಸಲು ನಿಖಿಲ್ ನಂತಹ ಅನನುಭವಿಯ ಹೊರತಾಗಿ ಅನುಭವಿ ನಾಯಕನಿಗೆ ಮಣೆ ಹಾಕಬೇಕು ಎಂಬುದು ಜೆಡಿಎಸ್ ನಾಯಕರ ಆಗ್ರಹವಾಗಿದೆ. ಹೀಗಾಗಿ ಪಕ್ಷದ ನಾಯಕರನ್ನೇ ಎದುರು ಹಾಕಿಕೊಂಡು ನಿಖಿಲ್ ಗೆ ಕುಮಾರಸ್ವಾಮಿ ಪಟ್ಟ ಕಟ್ಟುತ್ತಾರಾ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments