Webdunia - Bharat's app for daily news and videos

Install App

ನಾನು ದಾರಿ ತಪ್ಪಿದ್ದೆ, ನನ್ನ ಪತ್ನಿ ತಿದ್ದಿದ್ದಳು: ಎಚ್ ಡಿ ಕುಮಾರಸ್ವಾಮಿ

Krishnaveni K
ಸೋಮವಾರ, 15 ಏಪ್ರಿಲ್ 2024 (12:29 IST)
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಭರದಲ್ಲಿ ಹೆಣ್ಣು ಮಕ್ಕಳು ಹಾದಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿ ವಿವಾದಕ್ಕೊಳಗಾದ ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಮ್ಮ ಹೇಳಿಕೆಗೆ ವಿಷಾಧಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಅಷ್ಟಕ್ಕೂ ನಾನು ಅಶ್ಲೀಲ ಪದ ಬಳಸಿಲ್ಲ. ಗ್ಯಾರಂಟಿಗಳಿಗೆ ಮಾರು ಹೋಗಿ ದಾರಿ ತಪ್ಪಬೇಡಿ ಎಂದಿದ್ದೆ ಅಷ್ಟೇ ಎಂದು ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ.

ಈ ವೇಳೆ ತಮ್ಮ ವೈಯಕ್ತಿಕ ವಿಚಾರವನ್ನೂ ಮುಕ್ತವಾಗಿ ಹೇಳಿಕೊಂಡಿದ್ದಾರೆ. ಈ ಹಿಂದೆ ಸದನದಲ್ಲೂ ಇದನ್ನು ಹೇಳಿದ್ದೆ. ನಾನು ಜೀವನದಲ್ಲಿ ಒಮ್ಮೆ ಹಾದಿ ತಪ್ಪಿದ್ದೆ. ಬಳಿಕ ನನ್ನ ಪತ್ನಿ ನನ್ನನ್ನು ತಿದ್ದಿದಳು ಎಂದಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರು ಈ ಹಿಂದೆ ಮಹಿಳೆಯರ ಬಗ್ಗೆ ಮಾಡಿದ್ದ ಆಕ್ಷೇಪಾರ್ಹ ಹೇಳಿಕೆಗಳನ್ನೂ ಪ್ರಸ್ತಾಪಿಸಿದರು.

ನಿಮ್ಮದೇ ಪಕ್ಷದ ರಣದೀಪ್ ಸುರ್ಜೇವಾಲ ಬಿಜೆಪಿ ಸಂಸದೆ ಹೇಮಮಾಲಿನಿ ಬಗ್ಗೆ ಕೀಳಾಗಿ ಮಾತನಾಡಿದ್ದರು. ನಿಮ್ಮದೇ ಪಕ್ಷದ ಶಾಸಕ ಸದನದಲ್ಲೇ ಅತ್ಯಾಚಾರ್ಯ ಅನಿವಾರ್ಯವಾದರೆ ಆನಂದಿಸಿ ಎಂದಿದ್ದರು. ನಿಮ್ಮದೇ ಪಕ್ಷದ ನಾಯಕಿಯೊಬ್ಬರು ಇತ್ತೀಚೆಗೆ ಕಂಗನಾ ರಣಾವತ್ ಗೆ ಎಷ್ಟು ರೇಟ್ ಫಿಕ್ಸ್ ಮಾಡ್ತೀರಿ ಎಂದಿದ್ದರು. ಇದು ಅತ್ಯದ್ಭುತ ಹೇಳಿಕೆಯೇ ಎಂದು ಡಿಕೆ ಶಿವಕುಮಾರ್ ಗೆ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments