Webdunia - Bharat's app for daily news and videos

Install App

ಮಂಡ್ಯಕ್ಕೆ ಎಚ್ ಡಿ ಕುಮಾರಸ್ವಾಮಿಯೇ ಫಿಕ್ಸ್

Krishnaveni K
ಮಂಗಳವಾರ, 19 ಮಾರ್ಚ್ 2024 (10:43 IST)
Photo Courtesy: Twitter
ಮಂಡ್ಯ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿಯೇ ಕಣಕ್ಕಿಳಿಯಲು ಕೊನೆಯ ಕ್ಷಣದಲ್ಲಿ ತೀರ್ಮಾನಿಸಿದ್ದಾರೆ.

ಒಂದೆಡೆ ಸುಮಲತಾ ಬಿಜೆಪಿಯಿಂದ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದಾರೆ. ಆದರೆ ಇತ್ತ ಕುಮಾರಸ್ವಾಮಿ ಮಂಡ್ಯ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಒಂದು ವೇಳೆ ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯಲು ಬಿಜೆಪಿ ಬೆಂಬಲ ನೀಡದೇ ಇದ್ದರೆ ರಾಜ್ಯದಲ್ಲಿ ಮಾಡಿಕೊಂಡಿರುವ ಮೈತ್ರಿಗೆ ಪೆಟ್ಟು ಬೀಳಲಿದೆ.

ನಿನ್ನೆಯಷ್ಟೇ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ತೋಡಿಕೊಂಡಿದ್ದರು. ನಮಗೆ ಬೇಕಾದ ಮೂರು ಕ್ಷೇತ್ರಕ್ಕೆ ಇಷ್ಟೆಲ್ಲಾ ಲಾಬಿ ಮಾಡಬೇಕಾ ಎಂದು ಕಿಡಿ ಕಾರಿದ್ದರು. ಕೋಲಾರ ಟಿಕೆಟ್ ವಿಚಾರವಾಗಿ ಅವರು ಈ ರೀತಿ ಅಸಮಾಧಾನ ತೋಡಿಕೊಂಡಿದ್ದರು. ಇದೀಗ ಮಂಡ್ಯವೂ ಸುಮಲತಾಗೆ ಬಿಟ್ಟುಕೊಟ್ಟರೆ ಜೆಡಿಎಸ್ ಕೆರಳಿ ಕೆಂಡವಾಗಲಿದೆ.

ಈಗಿನ ಮಾಹಿತಿ ಪ್ರಕಾರ ಕುಮಾರಸ್ವಾಮಿಯೇ ಮಂಡ್ಯದಲ್ಲಿ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ. ಮಂಡ್ಯದಲ್ಲಿ ಕುಮಾರಸ್ವಾಮಿಗೆ ಅಭಿಮಾನಿ ಬಳಗವೇ ಇದೆ. ಕುಮಾರಸ್ವಾಮಿ ಸ್ಪರ್ಧಿಸಿದರೆ ಕಾಂಗ್ರೆಸ್ ಗೆ ಹೊಡೆತ ಬೀಳುವುದು ಗ್ಯಾರಂಟಿ. ಹೀಗಾಗಿ ಅವರೇ ಕಣಕ್ಕಿಳಿಯಲು ಹೊರಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Air India Plane crash: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಮಾನ ದುರಂತಗಳು ಯಾವುವು ಗೊತ್ತಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

ಮುಂದಿನ ಸುದ್ದಿ
Show comments