Webdunia - Bharat's app for daily news and videos

Install App

ಹಾಸನಾಂಬೆಗೆ ಎಲ್ಲಾ ಭಕ್ತರೂ ಒಂದೇ ಅಲ್ವಾ, ಕುಮಾರಸ್ವಾಮಿ ಕುಟುಂಬಕ್ಕೆ ದೇವಿಯ ಎದುರು ಸನ್ಮಾನಕ್ಕೆ ಅಪಸ್ವರ

Krishnaveni K
ಸೋಮವಾರ, 28 ಅಕ್ಟೋಬರ್ 2024 (08:52 IST)
Photo Credit: X
ಹಾಸನ: ನಿನ್ನೆಯಷ್ಟೇ ಸಂಸಾರ ಸಮೇತ ಹಾಸನಾಂಬೆಯ ದರ್ಶನ ಮಾಡಿದ್ದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕುಟುಂಬಕ್ಕೆ ದೇವಿಯ ಮುಂದೆ ಹಾರ ಹಾಕಿ ವಿಶೇಷ ಸನ್ಮಾನ ಮಾಡಿದ್ದಕ್ಕೆ ನೆಟ್ಟಿಗರು ಅಪಸ್ವರವೆತ್ತಿದ್ದಾರೆ.

ವರ್ಷಕ್ಕೊಮ್ಮೆ ತೆರೆಯುವ ಹಾಸನಾಂಬೆ ದೇಗುಲ ಮೊನ್ನೆಯಷ್ಟೇ ಓಪನ್ ಆಗಿದೆ. ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಪ್ರತಿನಿತ್ಯ ದೇವಿಯ ದರ್ಶನಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಕುಮಾರಸ್ವಾಮಿ ತಮ್ಮ ಪತ್ನಿ, ಸೊಸೆ, ಮೊಮ್ಮಗನೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಮಗ ನಿಖಿಲ್ ಗಾಗಿ ವಿಶೇಷ ಪ್ರಾರ್ಥನೆ ನಡೆಸಿದ್ದಾರೆ.

ದೇವಿಯ ಎದುರು ಕುಮಾರಸ್ವಾಮಿ ಕುಟುಂಬ ಕೆಲವು ಸಮಯ ನಿಂತಿದ್ದು, ಸೀರೆ, ಹೂ, ಹಣ್ಣು ಅರ್ಪಿಸಿ ಪೂಜೆ ಸಲ್ಲಿಸಿದರು. ಈ ವೇಳೆ ಕುಮಾರಸ್ವಾಮಿ ಮತ್ತು ಕುಟುಂಬದವರಿಗೆ ಅರ್ಚಕರು ಹೂ ಮಾಲೆ ಹಾಕಿ ಸನ್ಮಾನವನ್ನೂ ಮಾಡಿದರು. ಈ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವಿಗೆ ಎಲ್ಲಾ ಭಕ್ತರೂ ಒಂದೇ ಅಲ್ವಾ? ಯಾಕೆ ವಿಐಪಿಗಳಿಗೆ ಮಾತ್ರ ಈ ರೀತಿ ಹಾರ ಹಾಕಿ ಸನ್ಮಾನ? ಅದೇ ಹಾರವನ್ನು ದೇವಿಗೆ ಹಾಕಿ ಪೂಜೆ ಮಾಡಿ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನಾಂಬೆ ದರ್ಶನಕ್ಕೆ ಲಕ್ಷಾಂತರ ಮಂದಿ ಬರುತ್ತಿದ್ದು, ಎಲ್ಲರಿಗೂ ದಿನದ 24 ಗಂಟೆಯೂ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅದರಲ್ಲೂ ಸಾಮಾನ್ಯ ದರ್ಶನಕ್ಕೆ, ಪಾಸ್ ಪಡೆದು ದರ್ಶನ ಪಡೆಯುವವರಿಗೆ ಮತ್ತು ವಿಐಪಿಗಳಿಗೆ ಪ್ರತ್ಯೇಕ ಸರತಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮುಂದಿನ ಸುದ್ದಿ
Show comments