ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಐಕತ್ವ ಬದಲಾವಣೆ ಚರ್ಚೆ ಜೋರಾಗಿರುವಾಗ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಕ್ರಾಂತಿ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಮುಂದಿನ 6-7 ತಿಂಗಳಲ್ಲಿ ಯಾರೂ ನಿರೀಕ್ಷಿಸದ ರೀತಿಯಲ್ಲಿ ರಾಜ್ಯದಲ್ಲಿ ಬೆಳವಣಿಗೆಯಾಗಲಿದೆ ಎಂದರು.
ಜೆಡಿಎಸ್ ರಜತಮಹೋತ್ಸವದ ಅಂಗವಾಗಿ ಇಂದು ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿ ಎದುರು ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕರ್ನಾಟಕ ಸಂಪದ್ಭರಿತವಾದ ರಾಜ್ಯ. ಕಳೆದ 25-30 ವರ್ಷಗಳಲ್ಲಿ ದೇಶದ ಕೊಡುಗೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿತ್ತು. ಆದರೆ ಇದೀಗ ರಾಜ್ಯದ ಸಾಲದ ಪ್ರಮಾಣ ₹7.5 ಲಕ್ಷ ಕೋಟಿ ಆಗಿದೆ. ಈ ಸಾಲದಲ್ಲಿ ಸಿದ್ದರಾಮಯ್ಯ ಅವರ ಪಾಲು ₹5.5 ಲಕ್ಷ ಕೋಟಿ ಆಗಿದೆ.
ಈ ನಾಡಿನ ಮೇಲೆ ಇಷ್ಟು ಸಾಲ ಹೊರಿಸಿದ್ದಾರೆ. ಈಗಾಗಲೇ ಬೇರಸತ್ತಿರುವ ಜನ ಸರ್ಕಾರವನ್ನು ಕೊತ್ತೊಗೆಯಲು ಕಾಯುತ್ತಿದ್ದಾರೆ. ಮುಂದಿನ 6-7 ತಿಂಗಳಲ್ಲಿ ಯಾರೂ ನಿರೀಕ್ಷಿಸದ ರೀತಿ ಬೆಳವಣಿಗೆಗಳು ರಾಜ್ಯದಲ್ಲಿ ಆಗುವ ಸಾಧ್ಯತೆಯಿದೆ ಅಂತ ಹೊಸ ಕ್ರಾಂತಿಯ ಬಾಂಬ್ ಸಿಡಿಸಿದರು.
ಸಿದ್ದರಾಮಯ್ಯ ಗ್ಯಾರಂಟಿ ಯೋಜನೆ ಕೊಟ್ಟಿದ್ದೇನೆ ಅಂತಾರೆ. ಅವರ ಗ್ಯಾರಂಟಿ (Guarantee Scheme) ಕಾರ್ಯಕ್ರಮ ಜನರ ಜೀವನಕ್ಕೆ ಶಕ್ತಿ ತುಂಬುತ್ತಿಲ್ಲ.