Webdunia - Bharat's app for daily news and videos

Install App

ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯವಾಗಿದ್ದಾರಾ: ಇಲ್ಲಿದೆ ನಿಜಾಂಶ

Krishnaveni K
ಬುಧವಾರ, 13 ಆಗಸ್ಟ್ 2025 (09:19 IST)
ಬೆಂಗಳೂರು: ಕೇಂದ್ರದ ಹಾಲಿ ಸಚಿವ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಯವರ ಇತ್ತೀಚೆಗಿನ ಫೋಟೋ ನೋಡಿ ಅವರು ಆರಾಮವಾಗಿದ್ದಾರಾ ಎಂಬ ಸಂಶಯ ಕೆಲವರು ವ್ಯಕ್ತಪಡಿಸಿದ್ದರು. ಅದಕ್ಕೀಗ ಉತ್ತರ ಸಿಕ್ಕಿದೆ.
 

ಕಳೆದ ಕೆಲವು ದಿನಗಳಿಂದ ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಬಂದಿದ್ದು ಕಡಿಮೆ. ಮೊನ್ನೆಯಷ್ಟೇ ಪ್ರಧಾನಿ ಮೋದಿ ಬೆಂಗಳೂರು ಮೆಟ್ರೋ ಹಳದಿ ಲೈನ್ ಉದ್ಘಾಟನೆ ಮಾಡಿದ್ದರು. ಈ ವೇಳೆ ಕುಮಾರಸ್ವಾಮಿ ಕೂಡಾ ವೇದಿಕೆಯಲ್ಲಿದ್ದರು.

ಆದರೆ ಕುಮಾರಸ್ವಾಮಿಯವರ ಮುಖದಲ್ಲಿ ಎಂದಿನಂತೆ ಕಳೆಯಿರಲಿಲ್ಲ. ಕೊಂಚ ವೀಕ್ ಆದವರಂತೆ ಕಾಣುತ್ತಿದ್ದರು. ಹೀಗಾಗಿ ಅವರ ಫೋಟೋ ನೋಡಿ ಸೋಷಿಯಲ್ ಮೀಡಿಯಾದಲ್ಲಿ ಸಾರ್ವಜನಿಕರು ಅವರು ಆರಾಮವಾಗಿದ್ದಾರಾ ಎಂದು ಪ್ರಶ್ನೆ ಮಾಡಿದ್ದರು.

ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಕುಮಾರಸ್ವಾಮಿಯವರನ್ನು ಭೇಟಿಯಾದ ಫೋಟೋಗಳನ್ನು ಪ್ರತಾಪ್ ಸಿಂಹ ಹಂಚಿಕೊಂಡಿದ್ದರು. ಇದಕ್ಕೆ ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದು ಕುಮಾರಸ್ವಾಮಿಯವರು ಆರೋಗ್ಯವಾಗಿದ್ದಾರಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪ್ರತಾಪ್ ಸಿಂಹ ಉತ್ತರಿಸಿದ್ದು, ಅವರು ಆರಾಮವಾಗಿಯೇ ಇದ್ದಾರೆ ಎಂದಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯವಾಗಿದ್ದಾರಾ: ಇಲ್ಲಿದೆ ನಿಜಾಂಶ

ಭಾರತದ ಮೇಲಿನ ಹೊಟ್ಟೆ ಉರಿಗೆ ಅಮೆರಿಕಾದ ಹುಚ್ಚು ನಿರ್ಧಾರ

Karnataka Rains: ಇಂದೂ ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಭಾರೀ ಮಳೆಯ ಸಾಧ್ಯತೆ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments