Webdunia - Bharat's app for daily news and videos

Install App

ಬಿಎಸ್ ಯಡಿಯೂರಪ್ಪರನ್ನು ಹಾಡಿ ಹೊಗಳಿದ ಎಚ್ ಡಿ ಕುಮಾರಸ್ವಾಮಿ

Krishnaveni K
ಶನಿವಾರ, 22 ಜೂನ್ 2024 (15:10 IST)
ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದ್ದ ಎನ್ ಡಿಎ ಸಂಸದರಿಗೆ ಅಭಿನಂದನೆ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಸಚಿವ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ, ಈ ಹಿಂದೆ ಬಿಜೆಪಿ ಜೊತೆಗೆ ರಾಜ್ಯದಲ್ಲಿ 20-20 ಸರ್ಕಾರ ಮಾಡಿದ್ದಕ್ಕೇ ನಾನು ಹೆಸರು ಗಳಿಸಿದೆ ಎಂದಿದ್ದಾರೆ.

ಈ ಹಿಂದೆ ಅಂದಿನ 20-20 ಸರ್ಕಾರ ನನ್ನ ಜೀವನದ ದೊಡ್ಡ ತಪ್ಪು ಎನ್ನುತ್ತಿದ್ದಾರೆ. ಆದರೆ ಇದೀಗ ಬಿಜೆಪಿ ಜೊತೆಗೆ ಜೆಡಿಎಸ್ ಕೇಂದ್ರ ಮಟ್ಟದಲ್ಲಿ ಸಖ್ಯ ಬೆಳೆಸಿದ್ದು, ಇದೀಗ ಅಂದಿನ ಸರ್ಕಾರ ಮತ್ತು ಬಿಎಸ್ ಯಡಿಯೂರಪ್ಪ ಅವರನ್ನು ಕುಮಾರಸ್ವಾಮಿ ಹಾಡಿ ಹೊಗಳಿದ್ದಾರೆ.

ಇಂದು ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಂದು ಬಿಎಸ್ ವೈ ಜೊತೆ ಸರ್ಕಾರ ರಚಿಸಿದ್ದಕ್ಕೇ ನನಗೆ ರಾಜ್ಯದಲ್ಲಿ ಕೊಂಚ ಹೆಸರು ಮಾಡಲು ಸಾಧ್ಯವಾಯಿತು ಎಂದರು. ಅಂದು ಅಧಿಕಾರ ಕೊಡಲು ಆಗದೇ ಇದ್ದಿದ್ದು ಕೆಲವರು ಮಾಡಿದ ಕುತಂತ್ರದಿಂದಾಗಿ, ನನ್ನ ತಪ್ಪು ಅಗಿರಲಿಲ್ಲ ಎಂದರು.

ಇಂದು ಜನ ಬಿಜೆಪಿ-ಜೆಡಿಎಸ್ ಒಂದಾಗಿರಬೇಕೆಂದು ಬಯಸಿದ್ದಾರೆ. ಇದು ನನ್ನ ಸ್ವಂತ ಇಚ್ಛೆ ಕೂಡಾ. 2018 ರಲ್ಲೂ ನಾನು ಬಿಜೆಪಿ ಜೊತೆ ಅಧಿಕಾರ ಮಾಡಬೇಕು ಎಂದುಕೊಂಡಿದ್ದೆ. ಸ್ಥಳೀಯ ಮಟ್ಟದಿಂದಲೇ ನಮ್ಮ ಎರಡೂ ಪಕ್ಷಗಳೂ ಹೊಂದಾಣಿಕೆಯಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಮಟ್ಟ ಹಾಕಬಹುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments