ಅಂಬರೀಷ್ ಭೇಟಿ ಹಿಂದಿನ ರಹಸ್ಯ ಬಹಿರಂಗಪಡಿಸಿದ ಎಚ್ ಡಿಕೆ

Webdunia
ಸೋಮವಾರ, 7 ಮೇ 2018 (07:46 IST)
ಬೆಂಗಳೂರು: ಭಾನುವಾರ ಬೆಳ್ಳಂ ಬೆಳಿಗ್ಗೆಯೇ ಕಾಂಗ್ರೆಸ್ ನಾಯಕ ರೆಬಲ್ ಸ್ಟಾರ್ ಅಂಬರೀಷ್ ಮನೆಗೆ ತೆರಳಿ ಮಾತುಕತೆ ನಡೆಸಿರುವ ವಿವರವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಬಹಿರಂಗಪಡಿಸಿದ್ದಾರೆ.

ಮಂಡ್ಯ ಕ್ಷೇತ್ರದ ಟಿಕೆಟ್ ಸಿಕ್ಕರೂ ಸ್ಪರ್ಧೆಯಿಂದ ಹಿಂದೆ ಸರಿದಿದ್ದ ಅಂಬರೀಷ್ ಜತೆಗೆ ಕುಮಾರಸ್ವಾಮಿ ನಿನ್ನೆ ಮಾತುಕತೆ ನಡೆಸಿದ್ದರು. ಈ ವೇಳೆ ಕಾಂಗ್ರೆಸ್ ತನ್ನನ್ನು ಅವಮಾನ ಮಾಡಿತ್ತು ಎಂದು ಅಂಬಿ ಅಳಲು ತೋಡಿಕೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಮಾತುಕತೆಯ ವಿವರ ಬಹಿರಂಗಪಡಿಸಿದ್ದಾರೆ.

‘ಅಂಬರೀಷ್ ಗೆ ಯಾವುದೇ ಒತ್ತಡ ಹೇರಿಲ್ಲ. ಅವರನ್ನು ಭೇಟಿಯಾಗಿ ಬೆಂಬಲಿಸುವಂತೆ ಕೋರಿದ್ದೇನೆ ಅಷ್ಟೇ’ ಎಂದಿದ್ದಾರೆ. ಅಷ್ಟೇ ಅಲ್ಲದೆ, ಅಂಬರೀಷ್ ರನ್ನು ಕಡೆಗಣಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. ‘ಸಿಎಂ ಸಿದ್ದರಾಮಯ್ಯಗೆ ಉಪಕಾರ ಮಾಡಿದವರನ್ನು ಸ್ಮರಿಸುವ ಗುಣವಿಲ್ಲ. ಅಂಬರೀಷ್, ಶ್ರೀನಿವಾಸ್ ಪ್ರಸಾದ್ ವಿಚಾರದಲ್ಲಿ ಆಗಿದ್ದು ಎಲ್ಲರಿಗೂ ಗೊತ್ತಿರುವ ವಿಷಯವೇ’ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ನಿವಾಸದ ಎದುರು ಬೆಂಬಲಿಗರ ದಂಡು, ಮೌನದ ನಡುವೆ ಮಹತ್ವದ ನಿರ್ಧಾರ ಕೈಗೊಂಡ ಸಿದ್ದರಾಮಯ್ಯ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ಮುಂದಿನ ಸುದ್ದಿ
Show comments