Select Your Language

Notifications

webdunia
webdunia
webdunia
webdunia

ರಾಮಮಂದಿರ ದೇಣಿಗೆ ವಿವಾದ: ದಿಡೀರ್ ಪತ್ರಿಕಾಗೋಷ್ಠಿ ಕರೆದ ಎಚ್ ಡಿಕೆ

ರಾಮಮಂದಿರ ದೇಣಿಗೆ ವಿವಾದ: ದಿಡೀರ್ ಪತ್ರಿಕಾಗೋಷ್ಠಿ ಕರೆದ ಎಚ್ ಡಿಕೆ
ಬೆಂಗಳೂರು , ಬುಧವಾರ, 17 ಫೆಬ್ರವರಿ 2021 (10:27 IST)
ಬೆಂಗಳೂರು: ರಾಮಮಂದಿರಕ್ಕೆ ದೇಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಿತ ಹೇಳಿಕೆ ನೀಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಇಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದ್ದಾರೆ.


ತಮ್ಮ ಹೇಳಿಕೆ ವಿವಾದಕ್ಕೆ ಗುರಿಯಾಗುತ್ತಿದ್ದಂತೇ ಎಚ್ ಡಿಕೆ ಪತ್ರಿಕಾಗೋಷ್ಠಿ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಎಚ್ ಡಿಕೆ ಹೇಳಿಕೆಗೆ ಬಿಜೆಪಿ, ಆರ್ ಎಸ್ ಎಸ್ ಮತ್ತು ಪೇಜಾವರ ಶ್ರೀಗಳು ತೀವ್ರ ಆಕ್ಷೇಪವೆತ್ತಿದ್ದರು. ದೇಣಿಗೆ ಕೊಡದವರ ಮನೆ ಗುರುತು ಮಾಡಲಾಗುತ್ತಿದೆ ಎಂದು ವಿವಾದ ಸೃಷ್ಟಿಸಿದ್ದ ಎಚ್ ಡಿಕೆ ಈಗ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಾರೋ ಅಥವಾ ವಿವಾದಕ್ಕೆ ಸ್ಪಷ್ಟನೆ ನೀಡುತ್ತಾರೋ ಕಾದು ನೋಡಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನ್ಯ ಧರ್ಮದ ಯುವಕನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಗೆ ಕುಟುಂಬಸ್ಥರು ಮಾಡಿದ್ದೇನು?