ಈ ಷರತ್ತು ಒಪ್ಪಿದರೆ ಬಿಜೆಪಿ ಪಾದಯಾತ್ರೆಗೆ ಬರ್ತೀನಿ: ಕುಮಾರಸ್ವಾಮಿ ಹಾಕಿದ ಷರತ್ತೇನು

Krishnaveni K
ಗುರುವಾರ, 1 ಆಗಸ್ಟ್ 2024 (14:20 IST)
ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ ನಡೆಸಲಿರುವ ಪಾದ ಯಾತ್ರೆಗೆ ಜೆಡಿಎಸ್ ಅಸಮಾಧಾನ ಹೊರಹಾಕಿತ್ತು. ಇದೀಗ ಪಾದ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದರೆ ನನ್ನ ಈ ಷರತ್ತಿಗೆ ಒಪ್ಪಬೇಕು ಎಂದಿದ್ದಾರೆ. ಆ ಷರತ್ತು ಏನು ಗೊತ್ತಾ?

ಪಾದಯಾತ್ರೆಯಲ್ಲಿ ತಮ್ಮ ಬದ್ಧ ಎದುರಾಳಿ ಪ್ರೀತಂ ಗೌಡ ಭಾಗಿಯಾಗುತ್ತಿರುವುದು ಎಚ್ ಡಿಕೆ ಕೆಂಗಣ್ಣಿಗೆ ಗುರಿಯಾಗಿತ್ತು. ಬಿಜೆಪಿ ಪಾದ ಯಾತ್ರೆಯಲ್ಲಿ ನಾವು ಯಾವುದೇ ಕಾರಣಕ್ಕೂ ಭಾಗಿಯಾಗಲ್ಲ. ದೇವೇಗೌಡರ ಕುಟುಂಬಕ್ಕೆ ಕೆಡುಕು ಮಾಡಿದವರ ಜೊತೆಗೆ ನಾವು ಸೇರಬೇಕಾ ಎಂದು ಸಿಟ್ಟಿಗೆದ್ದಿದ್ದರು.

ಆದರೆ ಇದಾದ ಬಳಿಕ ಕೇಂದ್ರ ಸಚಿವ ಜೆಪಿ ನಡ್ಡಾ, ಪಲ್ಹಾದ್ ಜೋಶಿ ಈ ವಿಚಾರವಾಗಿ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ಮನಸ್ಸು ಬದಲಾಯಿಸಿರುವ ಕುಮಾರಸ್ವಾಮಿ, ನನ್ನ ಒಂದು ಷರತ್ತಿಗೆ ಒಪ್ಪಿದರೆ ಪಾದ ಯಾತ್ರೆಯಲ್ಲಿಭಾಗಿಯಾಗುವುದಾಗಿ ಹೇಳಿದ್ದಾರೆ.

ಪೆನ್ ಡ್ರೈವ್ ಹಂಚಿ ದೇವೇಗೌಡರ ಕುಟುಂಬ ನಾಶ ಮಾಡಲು ಪ್ರಯತ್ನಿಸಿದ ಪ್ರೀತಂ ಗೌಡ ಪಾದ ಯಾತ್ರೆಯಲ್ಲಿ ಇರಬಾರದು. ಹಾಗಿದ್ದರೆ ಪಾದ ಯಾತ್ರೆಯಲ್ಲಿ ಭಾಗಿಯಾಗುತ್ತೇನೆ ಎಂದು ಕುಮಾರಸ್ವಾಮಿ ಷರತ್ತು ಮುಂದಿಟ್ಟಿದ್ದಾರೆ. ಇದೀಗ ಬಿಜೆಪಿ ನಾಯಕರು ಷರತ್ತಿಗೆ ಒಪ್ಪಿಕೊಳ್ಳುತ್ತಾರಾ ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments