Webdunia - Bharat's app for daily news and videos

Install App

ಈ ಷರತ್ತು ಒಪ್ಪಿದರೆ ಬಿಜೆಪಿ ಪಾದಯಾತ್ರೆಗೆ ಬರ್ತೀನಿ: ಕುಮಾರಸ್ವಾಮಿ ಹಾಕಿದ ಷರತ್ತೇನು

Krishnaveni K
ಗುರುವಾರ, 1 ಆಗಸ್ಟ್ 2024 (14:20 IST)
ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ ನಡೆಸಲಿರುವ ಪಾದ ಯಾತ್ರೆಗೆ ಜೆಡಿಎಸ್ ಅಸಮಾಧಾನ ಹೊರಹಾಕಿತ್ತು. ಇದೀಗ ಪಾದ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದರೆ ನನ್ನ ಈ ಷರತ್ತಿಗೆ ಒಪ್ಪಬೇಕು ಎಂದಿದ್ದಾರೆ. ಆ ಷರತ್ತು ಏನು ಗೊತ್ತಾ?

ಪಾದಯಾತ್ರೆಯಲ್ಲಿ ತಮ್ಮ ಬದ್ಧ ಎದುರಾಳಿ ಪ್ರೀತಂ ಗೌಡ ಭಾಗಿಯಾಗುತ್ತಿರುವುದು ಎಚ್ ಡಿಕೆ ಕೆಂಗಣ್ಣಿಗೆ ಗುರಿಯಾಗಿತ್ತು. ಬಿಜೆಪಿ ಪಾದ ಯಾತ್ರೆಯಲ್ಲಿ ನಾವು ಯಾವುದೇ ಕಾರಣಕ್ಕೂ ಭಾಗಿಯಾಗಲ್ಲ. ದೇವೇಗೌಡರ ಕುಟುಂಬಕ್ಕೆ ಕೆಡುಕು ಮಾಡಿದವರ ಜೊತೆಗೆ ನಾವು ಸೇರಬೇಕಾ ಎಂದು ಸಿಟ್ಟಿಗೆದ್ದಿದ್ದರು.

ಆದರೆ ಇದಾದ ಬಳಿಕ ಕೇಂದ್ರ ಸಚಿವ ಜೆಪಿ ನಡ್ಡಾ, ಪಲ್ಹಾದ್ ಜೋಶಿ ಈ ವಿಚಾರವಾಗಿ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ಮನಸ್ಸು ಬದಲಾಯಿಸಿರುವ ಕುಮಾರಸ್ವಾಮಿ, ನನ್ನ ಒಂದು ಷರತ್ತಿಗೆ ಒಪ್ಪಿದರೆ ಪಾದ ಯಾತ್ರೆಯಲ್ಲಿಭಾಗಿಯಾಗುವುದಾಗಿ ಹೇಳಿದ್ದಾರೆ.

ಪೆನ್ ಡ್ರೈವ್ ಹಂಚಿ ದೇವೇಗೌಡರ ಕುಟುಂಬ ನಾಶ ಮಾಡಲು ಪ್ರಯತ್ನಿಸಿದ ಪ್ರೀತಂ ಗೌಡ ಪಾದ ಯಾತ್ರೆಯಲ್ಲಿ ಇರಬಾರದು. ಹಾಗಿದ್ದರೆ ಪಾದ ಯಾತ್ರೆಯಲ್ಲಿ ಭಾಗಿಯಾಗುತ್ತೇನೆ ಎಂದು ಕುಮಾರಸ್ವಾಮಿ ಷರತ್ತು ಮುಂದಿಟ್ಟಿದ್ದಾರೆ. ಇದೀಗ ಬಿಜೆಪಿ ನಾಯಕರು ಷರತ್ತಿಗೆ ಒಪ್ಪಿಕೊಳ್ಳುತ್ತಾರಾ ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments