Webdunia - Bharat's app for daily news and videos

Install App

ಸಿದ್ದರಾಮಯ್ಯ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಬಿಡುಗಡೆಗೊಳಿಸಿದ ವಿಡಿಯೋದಲ್ಲೇನಿದೆ (ವಿಡಿಯೋ)

Krishnaveni K
ಶನಿವಾರ, 28 ಸೆಪ್ಟಂಬರ್ 2024 (14:50 IST)
ಬೆಂಗಳೂರು: ತಮ್ಮ ವಿರುದ್ಧ ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣವನ್ನು ಎಳೆದು ತಂದಿರುವ ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಇಂದು ಪತ್ರಿಕಾಗೋಷ್ಠಿ ನಡೆಸಿ ಹರಿಹಾಯ್ದಿದ್ದಾರೆ. ಜೊತೆಗೆ ಸಿದ್ದರಾಮಯ್ಯ ವಿಡಿಯೋವೊಂದನ್ನು ಬಿಡುಗಡೆ ಮಾಡಿ ಇಂದಿನ ಅವರ ಧೋರಣೆಯನ್ನು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಮುಡಾ ಹಗರಣಕ್ಕೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದರ ಬಗ್ಗೆ ಕೆಂಡ ಕಾರಿದ್ದರು. ರಾಜ್ಯಪಾಲರು ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಪಾಠ ಮಾಡಿದ್ದರು. ಇದಕ್ಕೆ ಈಗ ಕುಮಾರಸ್ವಾಮಿ ವಿಡಿಯೋ ಮೂಲಕ ತಿರುಗೇಟು ನೀಡಿದ್ದಾರೆ.

2011 ರಲ್ಲಿ ಸಿದ್ದರಾಮಯ್ಯ ರಾಜ್ಯಪಾಲರ ಅಧಿಕಾರದ ಬಗ್ಗೆ ಮಾತನಾಡಿರುವ ವಿಡಿಯೋ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕರಾಗಿದ್ದಾಗ ಒಂದು ಧೋರಣೆ, ಆಡಳಿತದಲ್ಲಿದ್ದಾಗ ಒಂದು ಧೋರಣೆಯೇ ಎಂದು ಪ್ರಶ್ನೆ ಮಾಡಿದ್ದಾರೆ. 2011 ರಲ್ಲಿ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದಾಗ ರಾಜ್ಯಪಾಲರು ಸರ್ಕಾರ ತಪ್ಪು ಮಾಡುತ್ತಿದೆ ಎನಿಸಿದಾಗ ಪ್ರಶ್ನೆ ಮಾಡುವ ಅಧಿಕಾರವಿದೆ ಎಂದಿದ್ದರು. ಈಗ ತಾವು ಅಧಿಕಾರಕ್ಕೇರಿದಾಗ ರಾಜ್ಯಪಾಲರು ಹಸ್ತಕ್ಷೇಪ ಮಾಡಬಾರದು ಎನ್ನುತ್ತಿದ್ದಾರೆ. ಇದು ಯಾವ ನ್ಯಾಯ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಈ ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments