Webdunia - Bharat's app for daily news and videos

Install App

ಕೈ ಮುಗಿದು ಮನವಿ ಮಾಡುತ್ತೇನೆ, ಪ್ರಜ್ವಲ್ ಎಲ್ಲಿದ್ದರೂ ಬಂದು ಶರಣಾಗು: ಎಚ್ ಡಿ ಕುಮಾರಸ್ವಾಮಿ

Krishnaveni K
ಸೋಮವಾರ, 20 ಮೇ 2024 (15:53 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಸಿಲುಕಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಮುಂದೆ ತನಿಖೆಗೆ ಹಾಜರಾಗುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಇಂದು ಪತ್ರಿಕಾಗೋಷ್ಠಿ ನಡೆಸಿದ ಎಚ್ ಡಿ ಕುಮಾರಸ್ವಾಮಿ, ಪ್ರಜ್ವಲ್ ಎಲ್ಲೇ ಇದ್ದರೂ ಬಂದು ಎಸ್ಐಟಿ ಮುಂದೆ ತನಿಖೆ ಹಾಜರಾಗಬೇಕು ಎಂದಿದ್ದಾರೆ. ನನ್ನ, ಎಚ್ ಡಿ ದೇವೇಗೌಡರ ಮೇಲೆ ಸ್ವಲ್ಪವಾದರೂ ಗೌರವವಿದ್ದರೆ ತನಿಖೆಗೆ ಹಾಜರಾಗು ಎಂದು ಸಹೋದರನ ಪುತ್ರ ಪ್ರಜ್ವಲ್ ಗೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

‘ನನ್ನ ಮೇಲೆ, ದೇವೇಗೌಡರ ಮೇಲೆ ಕೊಂಚವಾದರೂ ಗೌರವವಿದ್ದರೆ ಕೈ ಮುಗಿದು ಮನವಿ ಮಾಡುತ್ತೇನೆ 24 ಇಲ್ಲಾ 48 ಗಂಟೆಯೊಳಗೆ ಬಂದು ಶರಣಾಗು ಈ ನೆಲದಲ್ಲಿ ಕಾನೂನು ಇರುವಾಗ ಭಯ ಯಾಕೆ? ಕಳ್ಳ ಪೊಲೀಸ್ ಆಟ ಬಿಟ್ಟು ವಿದೇಶದಿಂದ ಬಂದು ತನಿಖೆಗೆ ಹಾಜರಾಗುವಂತೆ ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಪದ್ಮನಾಭನಗರದ ನಿವಾಸಕ್ಕೆ ಪ್ರಜ್ವಲ್ ನನ್ನು ಬಿಡಿಸುವ ಬಗ್ಗೆ ಮಾತನಾಡಲು ಹೋಗಿಲ್ಲ. ಪ್ರಜ್ವಲ್ ಎಲ್ಲೇ ಇದ್ದರೂ ಬಂದು ಶರಣಾಗಲಿ ಎಂದು ತಂದೆಯವರಿಗೆ ಮನವಿ ಮಾಡಲು ಹೋಗಿದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.  ಈ ಪ್ರಕರಣ ಎಲ್ಲರೂ ತಲೆತಗ್ಗಿಸುವ ಪ್ರಕರಣ. ಹೀಗಾಗಿ ನಾನು ಮತ್ತೊಮ್ಮೆ ಸಾರ್ವಜನಿಕವಾಗಿ ಕ್ಷಮೆ ಕೋರುತ್ತಿದ್ದೇನೆ. ಈ ಕೇಸ್ ನಲ್ಲಿ ನನ್ನ ಹಾಗೂ ದೇವೇಗೌಡರನ್ನು ಎಳೆದು ತಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ