Webdunia - Bharat's app for daily news and videos

Install App

ಮೂರು ಬಾರಿ ಹಾರ್ಟ್ ಆಪರೇಷನ್ ಮಾಡ್ಸಿದ್ದೀನಿ ಎಂದ ಕುಮಾರಸ್ವಾಮಿ: ರೆಸ್ಟ್ ಮಾಡಣ್ಣ ಎಂದ ನೆಟ್ಟಿಗರು

Krishnaveni K
ಶನಿವಾರ, 30 ನವೆಂಬರ್ 2024 (17:00 IST)
ರಾಮನಗರ: ಇಂದು ರಾಮನಗರದಲ್ಲಿ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಗನ ಸೋಲು, ಜೆಡಿಎಸ್ ಪಕ್ಷದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ.

ನಾನು ಮೂರು ಬಾರಿ ವಾಲ್ ರಿಪ್ಲೇಸ್ ಮೆಂಟ್ ಆಪರೇಷನ್ ಮಾಡಿದ್ದೇನೆ. ಆದರೂ ರಾಜ್ಯಾದ್ಯಂತ ಓಡಾಡಿ ಹೋರಾಟ ಮಾಡುತ್ತಿದ್ದೇನೆ. ಯಾರಿಗೋಸ್ಕರ ಹೋರಾಟ ಮಾಡಬೇಕು. ಈ ರಾಜ್ಯದ ಜನರಿಗಾಗಿ ಹೋರಾಟ ಮಾಡಿದ್ದೇನೆ ಎಂದು ಭಾವನಾತ್ಮಕವಾಗಿ ಮಾತನಾಡಿದ್ದಾರೆ.

ಜೊತೆಗೆ ಮಗ ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ನಿಖಿಲ್ ಈಗ ಸೋತಿರಬಹುದು ಆದರೆ ಮುಂದೆ ಪಕ್ಷದ ಜವಾಬ್ಧಾರಿ ತೆಗೆದುಕೊಳ್ಳಲಿದ್ದಾನೆ. ರಾಜ್ಯಾದ್ಯಂತ ಓಡಾಡಿ ಮತ್ತೆ ಪಕ್ಷ ಸಂಘಟನೆ ಮಾಡಲಿದ್ದಾನೆ. ಹಿರಿಯರ ಸಲಹೆ ಪಡೆದು ಕೆಲಸ ಮಾಡಲಿದ್ದಾರೆ ಎಂದಿದ್ದಾರೆ.

ಕುಮಾರಸ್ವಾಮಿ ಹಾರ್ಟ್ ಆಪರೇಷನ್ ಬಗ್ಗೆ ಮಾತನಾಡಿರುವುದಕ್ಕೆ ನೆಟ್ಟಿಗರು ಕಾಮೆಂಟ್ ಮಾಡಿದ್ದು, ಹಾಗಿದ್ದರೆ ಮನೆಯಲ್ಲಿದ್ದು ರೆಸ್ಟ್ ಮಾಡಣ್ಣ ಎಂದು ಕುಹುಕ ಮಾತನಾಡಿದ್ದಾರೆ. ಮತ್ತೆ ಕೆಲವರು ಮೊದಲು ಜೆಡಿಎಸ್ ನ ಕುಟುಂಬ ರಾಜಕಾರಣಕ್ಕೆ ಒತ್ತು ನೀಡುವುದು ಬಿಡಿ. ಆಗ ಪಾರ್ಟಿ ಉದ್ದಾರವಾಗುತ್ತದೆ ಎಂದು ಸಲಹೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments