Webdunia - Bharat's app for daily news and videos

Install App

ನಾನು ಬೇಗ ಸಾಯಲ್ಲ, 84 ವರ್ಷ ಆಯಸ್ಸಿದೆ: ಎಚ್ ಡಿ ಕುಮಾರಸ್ವಾಮಿ

Krishnaveni K
ಶನಿವಾರ, 16 ಮಾರ್ಚ್ 2024 (10:22 IST)
ಮಂಡ್ಯ: ನಾನು ಬೇಗ ಸಾಯಲ್ಲ, ನನಗೆ 84 ವರ್ಷ ಆಯಸ್ಸಿದೆ ಎಂದು ಜ್ಯೋತಿಷಿಗಳೇ ಹೇಳಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.

ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಭಾವುಕರಾಗಿ ಮಾತನಾಡಿದ್ದಾರೆ. ನನಗೆ ಮಾರ್ಚ್ 21 ಕ್ಕೆ ಒಂದು ಆಪರೇಷನ್ ಇದೆ. ಆದರೆ ನಾನು ಅಷ್ಟು ಬೇಗ ಸಾಯಲ್ಲ. ನನ್ನ ಜನರ ಋಣ ತೀರಿಸಿಯೇ ಮಣ್ಣಿಗೆ ಹೋಗುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯ ಕ್ಷೇತ್ರದಲ್ಲಿ ಈ ಬಾರಿ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯಲಿರುವುದಾಗಿ ಅವರು ಈ ವೇಳೆ ಸೂಚನೆ ಕೊಟ್ಟಿದ್ದಾರೆ. ಸ್ವಾಭಿಮಾನ ಎಂದು ಮಾತಿನಲ್ಲಿ ಹೇಳಿದರೆ ಸಾಲದು, ಕೆಲಸದಲ್ಲೂ ಇರಬೇಕು ಎಂದ ಅವರು ಸುಮಲತಾಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.

ಮಂಡ್ಯ ಜನರ ಋಣ ನನ್ನ ಮೇಲಿದೆ. ಜನರ ಋಣ ತೀರಿಸಿದ ಮೇಲೆಯೇ ನಾನು ಮಣ್ಣಿನಲ್ಲಿ ಮಣ್ಣಾಗಿ ಹೋಗುವುದು. ಅಲ್ಲಿಯವರೆಗೂ ಜನರ ಸೇವೆ ಮಾಡುತ್ತಲೇ ಇರುತ್ತೇನೆ. ದೇವೇಗೌಡರೂ ಜ್ಯೋತಿಷಿಗಳ ಮಾತು ಕೇಳಿಯೇ ಬದುಕಿದ್ದಾರೆ. ನಾನು ಜ್ಯೋತಿಷಿಗಳ ಮಾತು ನಂಬುವುದಾಗಿ ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments