Webdunia - Bharat's app for daily news and videos

Install App

ನನ್ನಿಂದ ತಪ್ಪಾದರೆ ಹೇಳಿ, ಜೆಡಿಎಸ್ ಪಕ್ಷ ನನ್ನದು, ದೇವೇಗೌಡರದ್ದಲ್ಲ: ಎಚ್ ಡಿ ಕುಮಾರಸ್ವಾಮಿ

Krishnaveni K
ಶುಕ್ರವಾರ, 14 ಜೂನ್ 2024 (13:37 IST)
Photo Credit: Facebook
ಬೆಂಗಳೂರು: ಕೇಂದ್ರ ಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಬಂದ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿಗೆ ಅದ್ಭುತ ಸ್ವಾಗತ ದೊರೆತಿದೆ. ಈ ವೇಳೆ ಅವರು ಜನರನ್ನುದ್ದೇಶಿಸಿ ಭಾವುಕರಾಗಿ ಮಾತನಾಡಿದ್ದಾರೆ.

ಎಚ್ ಡಿ ಕುಮಾರಸ್ವಾಮಿ ಜೊತೆಗೆ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡಾ ಇದ್ದರು. ಅಭಿಮಾನಿಗಳು ನೂತನ ಕೇಂದ್ರ ಸಚಿವ ಕುಮಾರಸ್ವಾಮಿಗೆ ಬೃಹತ್ ಸೇಬಿನ ಹಾರ ಹಾಕಿ ಸ್ವಾಗತಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಜೆಡಿಎಸ್ ಪಕ್ಷ ನನ್ನದು ಅಥವಾ ದೇವೇಗೌಡರದ್ದಲ್ಲ. ನಿಮ್ಮದು ಎಂದು ಭಾವುಕರಾಗಿ ಹೇಳಿದ್ದಾರೆ.

‘ದೇವರ ಆಶೀರ್ವಾದದಿಂದ ನಾನು ಈವತ್ತು ಕೇಂದ್ರ ಮಂತ್ರಿಯಾಗಿದ್ದೇನೆ. ನಿಮ್ಮೆಲ್ಲರ ಸಮಸ್ಯೆಗಳಿಗೆ ಒಂದೊಂದಾಗಿ ಪರಿಹಾರ ನೀಡಲು ಪ್ರಯತ್ನಿಸುತ್ತೇನೆ. ನನಗೆ ಈಗಲೇ ಸನ್ಮಾನ ಸ್ವೀಕರಿಸಲು ಇಷ್ಟವಿಲ್ಲ. ನಾನು ಮಾಡುವ ಕೆಲಸ ನೋಡಿಕೊಂಡು ಅಭಿನಂದಿಸಿ. ನನ್ನನ್ನು ಯಾವಾಗಲೂ ಹೊಗಳುವುದಲ್ಲ. ನನ್ನಿಂದ ತಪ್ಪಾದರೂ ಮುಚ್ಚುಮರೆಯಿಲ್ಲದೇ ಹೇಳಿ. ಆಗ ನಾನು ತಿದ್ದಿಕೊಳ್ಳುತ್ತೇನೆ.

ಜೆಡಿಎಸ್ ಪಕ್ಷ ನನ್ನದು, ದೇವೇಗೌಡರದ್ದಲ್ಲ, ಇದು ನಿಮ್ಮ ಪಕ್ಷ, ನೀವೇ ಬೆಳೆಸಿದ ಪಕ್ಷ. ನನ್ನ ಕ್ಷೇತ್ರದಲ್ಲಿ ಈಗ ನನಗೇ ಎಲ್ಲಾ ಕೆಲಸ ಮಾಡಲು ಸಾಧ್ಯವಾಗದೇನೋ. ಆದರೆ ನನ್ನ ಬದಲು ನಿಖಿಲ್ ಕುಮಾರಸ್ವಾಮಿಯವರಿರುತ್ತಾರೆ. ನಿಮ್ಮ ಜೊತೆಗೆ ನಾವು ಯಾವಾಗಲೂ ಇರುತ್ತೇವೆ’ ಎಂದು ಜನರಿಗೆ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments