ನನಗೆ ಹುಚ್ಚ ಎನ್ನುವವರಿಗೆ ಸಿಎಂ ಪಟ್ಟದ ಹುಚ್ಚು: ಡಿಕೆ ಶಿವಕುಮಾರ್ ಗೆ ಟಾಂಗ್ ಕೊಟ್ಟ ಎಚ್ ಡಿ ಕುಮಾರಸ್ವಾಮಿ

Krishnaveni K
ಶನಿವಾರ, 6 ಜುಲೈ 2024 (13:04 IST)
ಬೆಂಗಳೂರು: ಕುಮಾರಸ್ವಾಮಿ ಒಬ್ಬ ಹುಚ್ಚ. ಅವರನ್ನು ಆಸ್ಪತ್ರೆಗೆ ಸೇರಿಸುವುದು ಒಳ್ಳೆಯದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗೆ ಈಗ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ನನಗೆ ಹುಚ್ಚು ಎನ್ನುವವರಿಗೆ ಸಿಎಂ ಪಟ್ಟದ ಹುಚ್ಚು ಹಿಡಿದಿದೆ ಎಂದು ಮತ್ತೊಮ್ಮೆ ಡಿಕೆಶಿ ಹೆಸರು ಹೇಳದೇ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಉಪಮುಖ್ಯಮಂತ್ರಿಗಳು ಮೊದಲು ತಮ್ಮ ಹುಚ್ಚನ್ನು ಪರೀಕ್ಷೆ ಮಾಡಿಕೊಳ್ಳಲಿ ಎಂದು ಟಾಂಗ್ ಕೊಟ್ಟಿದ್ದಾರೆ.

ಮುಡಾ ಹಗರಣದ ಬಗ್ಗೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ, ಇದೆಲ್ಲಾ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವವರಿಂದಲೇ ಹೊರಬಂದಿರುವ ಹಗರಣ ಎಂದಿದ್ದರು. ಇದಕ್ಕೆ ಪ್ರತಿಯಾಗಿ ಡಿಕೆಶಿ, ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ ಎಂದಿದ್ದರು. ಅವರ ಮಾತಿನ ಚಕಮಕಿ ಮತ್ತೆ ಮುಂದುವರಿದಿದೆ.

ಡಿಕೆಶಿ ಹೇಳಿಕೆಗೆ ಈಗ ಕುಮಾರಸ್ವಾಮಿ ಕೂಡಾ ತಿರುಗೇಟು ನೀಡಿದ್ದಾರೆ. ನಿನ್ನೆಯಷ್ಟೇ ಜನತಾ ದರ್ಶನ ನಡೆದಿದ್ದ ಕುಮಾರಸ್ವಾಮಿ ವಿರುದ್ಧವೂ ಡಿಕೆಶಿ ವ್ಯಂಗ್ಯ ಮಾಡಿದ್ದರು. ಕುಮಾರಸ್ವಾಮಿಗೆ ಜನತಾ ದರ್ಶನ ಮಾಡುವ ಅಧಿಕಾರವಿಲ್ಲ ಎಂದಿದ್ದರು. ಕುಮಾರಸ್ವಾಮಿ ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗಿದ್ದು ಭಾರೀ ಸುದ್ದಿಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments