Webdunia - Bharat's app for daily news and videos

Install App

ನಾಗಮಂಗಲ ಕೋಮುಗಲಭೆ ರೂವಾರಿ ಈಗಾಗಲೇ ಪರಾರಿಯಾಗಿರ್ತಾನೆ: ಎಚ್ ಡಿ ಕುಮಾರಸ್ವಾಮಿ ವ್ಯಂಗ್ಯ

Krishnaveni K
ಗುರುವಾರ, 12 ಸೆಪ್ಟಂಬರ್ 2024 (15:03 IST)
ಬೆಂಗಳೂರು: ನಾಗಮಂಗಲದಲ್ಲಿ ನಡೆದ ಕೋಮುಗಲಭೆ ವಿಚಾರ ಈಗ ಆಡಳಿತ ಪಕ್ಷ ಮತ್ತು ವಿಪಕ್ಷ ನಾಯಕರ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ. ಇದೀಗ ಗೃಹಸಚಿವ ಜಿ ಪರಮೇಶ್ವರ್ ವಿರುದ್ಧ ಮಂಡ್ಯ ಸಂಸದರೂ ಆಗಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕೋಮುಗಲಭೆ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡಬಾರದು. ಇದು ಸಣ್ಣ ಘಟನೆಯಷ್ಟೇ. ಇಲ್ಲಿ ನಡೆದಿರುವುದು ಕೋಮುಗಲಭೆಯೇ ಅಲ್ಲ ಎಂದು ಗೃಹಸಚಿವ ಪರಮೇಶ್ವರ್ ಹೇಳಿದ್ದರು.

ಆದರೆ ಗೃಹಸಚಿವರ ಹೇಳಿಕೆ ಕುಮಾರಸ್ವಾಮಿಯವರನ್ನು ಕೆರಳಿಸಿದೆ. ಸರ್ವಜನಾಂಗದ ಶಾಂತಿಯ ತೋಟ ಎಂದು ಒಂದು ಸಮುದಾಯವನ್ನು ಓಲೈಸಲು ಹೋಗಿದ್ದಕ್ಕೇ ಈವತ್ತು ಈ ಘಟನೆಯಾಗಿದೆ. ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿದುಕೊಂಡು ಓಡಾಡುತ್ತಿದ್ದಾರೆ ಎಂದು ನಿಮ್ಮ ಆಡಳಿತ ಯಾವ ಮಟ್ಟಿಗಿದೆ ಎಂದು ಗೊತ್ತಾಗುತ್ತದೆ. ನಿಮ್ಮದು ಇಟ್ಕೊಂಡು ನಮಗೆ ಬುದ್ಧಿ ಹೇಳಲು ಬರಬೇಡಿ ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಇನ್ನು ನಾಗಮಂಗಲ ಘಟನೆಯ ನಿಜವಾದ ರೂವಾರಿ ಈಗಾಗಲೇ ಪರಾರಿಯಾಗಿರುತ್ತಾನೆ. ಜೀವನಕ್ಕೆ ಆಧಾರವಾಗಿದ್ದವರನ್ನು ಯಾರನ್ನಾದರೂ ಒಳಗೆ ಹಾಕಿಸಿರ್ತಾರೆ ಎಂದು ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ. ಘಟನೆ ನಡೆದ ನಾಗಮಂಗಲಕ್ಕೆ ನಾಳೆ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments