Webdunia - Bharat's app for daily news and videos

Install App

ವಕ್ಫ್ ಹೆಸರಲ್ಲಿ ಆಸ್ತಿ ಹೊಡಿತಿದ್ದಾರೆ: ಎಚ್ ಡಿ ಕುಮಾರಸ್ವಾಮಿ

Krishnaveni K
ಮಂಗಳವಾರ, 29 ಅಕ್ಟೋಬರ್ 2024 (14:31 IST)
ಬೆಂಗಳೂರು: ವಕ್ಫ್ ಹೆಸರಲ್ಲಿ ಆಸ್ತಿ ಹೊಡಯುತ್ತಿದ್ದಾರೆ. ಅವರಿಗೆ ರಕ್ಷಣೆ ಕೊಡಬೇಡಿ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ವಕ್ಫ್ ವಿವಾದದ ಬಗ್ಗೆ ಅವರು ಮಾಧ್ಯಮಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ಈ ಮೂಲಕ ಎಚ್ಚರಿಕೆ ಕೊಡುತ್ತಿದ್ದೇನೆ. ಓಲೈಸಲು ಸರ್ಕಾರದ ಆಸ್ತಿಯನ್ನು ಲೂಟಿ ಮಾಡುವವರಿಗೆ ಕೊಡುತ್ತಾ ಬಂದರೆ ಸರ್ಕಾರ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಇದು ಇತ್ಥೀಚೆಗೆ ಕೇಂದ್ರ ಸರ್ಕಾರದ ಕ್ಯಾಬಿನೆಟ್ ನಲ್ಲೂ ವಕ್ಫ್ ಗೆ ಸಂಬಂಧಪಟ್ಟ ಆಸ್ತಿಗಳು, ನಿರ್ಧಾರಗಳ ಬಗ್ಗೆ ಚರ್ಚೆಗಳಾಗಿತ್ತು. ಅದರ ಬಗ್ಗೆ ಪರಿಶೀಲನೆಯಾಗಬೇಕು ಎಂದು ಚರ್ಚೆಯಾಗಿದೆ.

ಈವತ್ತು ಕರ್ನಾಟಕದಲ್ಲಿ ಈ ರೀತಿಯ ವಾತಾವರಣ ನಿರ್ಮಾಣವಾಗಿರುವುದರಿಂದ ರೈತರು ಭಯಭೀತರಾಗಿದ್ದಾರೆ. ಮೊನ್ನೆ ವಿಜಯಪುರದಲ್ಲಿ ಆಯ್ತು, ಈಗ ಧಾರವಾಡದಲ್ಲಿ ಆಗಿದೆ. ರೈತರ ಹೆಸರಿನಲ್ಲಿರಲಿ, ಸರ್ಕಾರದ ಹೆಸರಿನಲ್ಲಿ ವಕ್ಫ್ ಹೆಸರಿನಲ್ಲಿ ಭೂಗಳ್ಳರು ಆ ಆಸ್ತಿಯನ್ನು ಲಪಟಾಯಿಸುವುದಕ್ಕೆ ಅವಕಾಶ ನೀಡಬಾರದು. ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ವಕ್ಫ್ ಆಸ್ತಿ ನೋಟಿಫಿಕೇಷನ್ ಕುರಿತಂತೆ ಈಗ ರಾಜ್ಯ ಬಿಜೆಪಿ ಕಾಂಗ್ರೆಸ್ ವಿರುದ್ಧ ಅಸ್ತ್ರವಾಗಿ ಬಳಸಲು ಮುಂದಾಗಿದೆ. ಮುಂಬರುವ ಉಪಚುನಾವಣೆ ದೃಷ್ಟಿಯಿಂದ ಬಿಜೆಪಿಗೆ ರಾಜ್ಯ ಸರ್ಕಾರದ ವಿರುದ್ಧ ಹೋರಾಡಲು ತಕ್ಕ ಅಸ್ತ್ರವೇ ಸಿಕ್ಕಂತಾಗಿದೆ. ಇಂದು ಬಿಜೆಪಿಯ ನಿಯೋಗ ವಿಜಯಪುರಕ್ಕೆ ಭೇಟಿ ನೀಡಿ ವಾಸ್ತವ ತಿಳಿಯಲೂ ಪ್ರಯತ್ನಿಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments