Select Your Language

Notifications

webdunia
webdunia
webdunia
webdunia

ಕಲ್ಲಡ್ಕದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ಕುಮಾರಸ್ವಾಮಿ

ಕಲ್ಲಡ್ಕದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ಕುಮಾರಸ್ವಾಮಿ
ಮಂಗಳೂರು , ಸೋಮವಾರ, 11 ಡಿಸೆಂಬರ್ 2023 (10:02 IST)
Photo Courtesy: Twitter
ಮಂಗಳೂರು: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕ್ರೀಡೋತ್ಸವದಲ್ಲಿ ಭಾಗಿಯಾದ ಮಾಜಿ ಸಿಎಂ ಕುಮಾರಸ್ವಾಮಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆ.

ಜೆಡಿಎಸ್ ಜಾತ್ಯಾತೀಯ ಪಕ್ಷವೆಂದು ಹೆಸರುವಾಸಿ. ಆದರೆ ಇತ್ತೀಚೆಗೆ ಬಿಜೆಪಿ ಜೊತೆ ಸಖ್ಯ ಬೆಳೆಸಿದ ಮೇಲೆ ಕುಮಾರಸ್ವಾಮಿ ಧೋರಣೆ ಕೂಡಾ ಕೊಂಚ ಬದಲಾಗಿದೆ.

ಇದೀಗ ಕಲ್ಲಡ್ಕದಲ್ಲಿ ನಡೆದ ಕ್ರೀಡೋತ್ಸವದಲ್ಲಿ ಭಾಗಿಯಾದ ಕುಮಾರಸ್ವಾಮಿ ಹಿಂದೂ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಹಾಡಿಹೊಗಳಿದ್ದಲ್ಲದೆ, ಭಾಷಣದ ಕೊನೆಯಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿ ಎಲ್ಲರನ್ನೂ ಅಚ್ಚರಿಪಡಿಸಿದ್ದಾರೆ.

ಕುಮಾರಸ್ವಾಮಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಕೂಡಾ ಈಗ ಸಂಘಿಗಳಾಗುತ್ತಿದ್ದಾರೆ ಎಂದು ಕೆಲವರು ಕಾಲೆಳೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಶ್ಮೀರದಲ್ಲಿ 370 ನೇ ವಿಧಿ ರದ್ದು ಸರಿಯಾ, ತಪ್ಪಾ? ಇಂದು ಸುಪ್ರೀಂ ತೀರ್ಪು