25 ಎಕರೆ ದಾನ ಮಾಡಲು ಡಿಕೆ ಶಿವಕುಮಾರ್ ರಾಜವಂಶದವರಾ: ಎಚ್ ಡಿ ಕುಮಾರಸ್ವಾಮಿ

Krishnaveni K
ಶನಿವಾರ, 9 ನವೆಂಬರ್ 2024 (18:13 IST)
ಚನ್ನಪಟ್ಟಣ: ಉಪಚುನಾವಣೆ ಪ್ರಚಾರದ ಸಂದರ್ಭದಲ್ಲಿ ಎಚ್ ಡಿ ದೇವೇಗೌಡರ ಕುಟುಂಬಸ್ಥರು ಒಂದು ಗುಂಟೆ ಜಮೀನು ದಾನ ಮಾಡಿದ್ದಾರಾ ನಾವು ಶಾಲೆಗೆ 25 ಎಕರೆ ದಾನ ಮಾಡಿದ್ದೆವು ಎಂದಿದ್ದಡಿಕೆ ಶಿವಕುಮಾರ್ ಗೆ ಇಂದು ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

25 ಎಕರೆ ದಾನ ಮಾಡಲು ಅವರೇನು ಮಹಾರಾಜರ ವಂಶದವರೇ ಎಂದ ಕುಮಾರಸ್ವಾಮಿ,  ದಾನ ಕೊಟ್ಟಿದ್ದರೆ ದಾಖಲೆ ಸಮೇತ ಜನರಿಗೆ ತಿಳಿಸಲಿ. ಸುಳ್ಳು ಹೇಳುವುದಕ್ಕೂ ಇತಿಮಿತಿ ಇರಬೇಕು. ನಾನು ಇವರ ರೀತಿ ಅದು ಮಾಢಿದ್ದೇವೆ, ಇದು ಮಾಡಿದ್ದೇವೆ ಎಂದು ಬೋರ್ಡ್ ಹಾಕಿಕೊಂಡಿಲ್ಲ ಎಂದಿದ್ದಾರೆ.

ನಾನು ಸಿಎಂ ಆಗುವುದಕ್ಕೆ ಮೊದಲು ರಾಜ್ಯದಲ್ಲಿ ಎಷ್ಟು ಶಾಲಾ, ಕಾಲೇಜುಗಳಿದ್ದವು, ನಾನು ಸಿಎಂ ಆದ ಮೇಲೆ ಎಷ್ಟು ಶಾಲಾ ಕಾಲೇಜುಗಳು ಆಗಿವೆ ಎಂಬುದನ್ನು ಲೆಕ್ಕ ತೆಗೆದು ನೋಡಬಹುದು. ಕನಕಪುರದ ಶಾಸನಕರಾಗಿ, ಉಪಮುಖ್ಯಮಂತ್ರಿಯಾಗಿ ಈ ವ್ಯಕ್ತಿಯ ಕೊಡುಗೆ ಏನೆಂದು ದಾಖಲೆ ತೆಗೆದು ನೋಡಲಿ ಎಂದು ಕುಮಾರಸ್ವಾಮಿ ಸವಾಲೆಸೆದಿದ್ದಾರೆ.

ಸರ್ಕಾರ ಕಿತ್ತೊಗೆಯುವುದು ಎಂದರೆ ಕಡಲೆಕಾಯಿ ಗಿಡ ಕಿತ್ತ ಹಾಗಲ್ಲ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೂ ಪ್ರತಿಕ್ರಿಯಿಸಿದ ಅವರು ನಾವು ಹೇಳಿದ್ದು ಸರ್ಕಾರವನ್ನೇ ಕಿತ್ತೊಗೆಯುತ್ತೇವೆ ಎಂದು ಕಡಲೆಕಾಯಿ ಗಿಡ ಎಂದಿಲ್ಲ ಎಂದರು. ಸರ್ಕಾರವನ್ನು ಕಿತ್ತೊಗೆಯಬೇಕು ಎನ್ನುವುದು ಜನರ ಭಾವನೆ. ಅದನ್ನೇ ದೇವೇಗೌಡರು ಹೇಳಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪುಣೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, 18ವರ್ಷದ ಯುವಕ ಅರೆಸ್ಟ್‌

Indigo Crisis: ಇನ್ನೂ ಎಷ್ಟು ಲಗೇಜ್‌ಗಳು ಪ್ರಯಾಣಿಕರ ಕೈ ಸೇರಲಿದೆ ಗೊತ್ತಾ

ತಿರುಪತಿ, ಶಿರಡಿಗೆ ಸಂಪರ್ಕಿಸುವ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ, ಪ್ರಯಾಣಿಕರಿಗೆ ಗುಡ್‌ನ್ಯೂಸ್

ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಮುಂದಿನ ಸುದ್ದಿ
Show comments