ಮತದಾನ ಮುಗಿದ ಬಳಿಕವೂ ಮಗನ ಗೆಲುವಿಗೆ ಎಚ್ ಡಿ ಕುಮಾರಸ್ವಾಮಿ ಶ್ರಮ

Krishnaveni K
ಶುಕ್ರವಾರ, 15 ನವೆಂಬರ್ 2024 (11:27 IST)
ಮೈಸೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪುತ್ರ ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತದಾನ ಮುಗಿದ ಬಳಿಕವೂ ಶ್ರಮವಹಿಸುತ್ತಿದ್ದಾರೆ.

ಮಗನ ನಾಮಪತ್ರ ಸಲ್ಲಿಕೆ ಮೊದಲು ಎಚ್ ಡಿಕೆ ದಂಪತಿ ಸಮೇತ ದೇವರ ಮೊರೆ ಹೋಗಿದ್ದರು. ನಿಖಿಲ್ ಪರ ಮತಯಾಚನೆ ಆರಂಭಕ್ಕೂ ಮುನ್ನವೂ ಹಾಸನಾಂಬೆಯ ದರ್ಶನ ಪಡೆದು ಪೂಜೆ ಸಲ್ಲಿಸಿದ್ದರು. ಮೊನ್ನೆ ಮತದಾನದ ದಿನ ನಿಖಿಲ್ ಕುಮಾರಸ್ವಾಮಿ ಆಂಜನೇಯನ ದರ್ಶನ ಪಡೆದಿದ್ದರು.

ಇಂದು ಎಚ್ ಡಿ ಕುಮಾರಸ್ವಾಮಿ ಪುತ್ರನ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಲು ನಾಡದೇವತೆ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಬಂದಿದ್ದಾರೆ. ಇಂದು ಬೆಳಿಗ್ಗೆಯೇ ಚಾಮುಂಡಿ ಬೆಟ್ಟಕ್ಕೆ ಬಂದ ಕುಮಾರಸ್ವಾಮಿ ಮಗನ ಗೆಲುವಿಗಾಗಿ ಪ್ರಾರ್ಥಿಸಿ ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿ ತೆರಳಿದ್ದಾರೆ.

ನವಂಬರ್ 23 ಕ್ಕೆ ಉಪಚುನಾವಣೆ ಫಲಿತಾಂಶ ಬರಲಿದೆ. ಎರಡು ಬಾರಿ ಚುನಾವಣೆ ಸ್ಪರ್ಧಿಸಿ ಸೋತಿದ್ದ ನಿಖಿಲ್ ಈ ಬಾರಿಯಾದರೂ ಗೆಲ್ಲಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಅಷ್ಟೇ ಅಲ್ಲದೆ, ಕುಮಾರಸ್ವಾಮಿಗೆ ಈ ಗೆಲುವು ಪ್ರತಿಷ್ಠೆಯ ಕಣವಾಗಿದೆ. ಹೀಗಾಗಿ ಮಗನ ಗೆಲುವಿಗಾಗಿ ಈಗ ದೇವರ ಮೊರೆ ಹೋಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಾತಾಳಕ್ಕೆ ಕುಸಿಯುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಬೇಡ, ಪ್ರಿಯಾಂಕ್ ಗಾಂಧಿ ಬಂದ್ರೆ ಸರಿ ಹೋಗುತ್ತೆ

ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ: ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯ

ಚೆಲುವರಾಯಸ್ವಾಮಿ ನೇತೃತ್ವದಲ್ಲಿ ದೆಹಲಿಗೆ ಕೈ ನಾಯಕರ ದಂಡು

ಬಿಬಿಎಂಪಿ ಖಾತಾ ಸರ್ಟಿಫಿಕೇಟ್ ಆನ್ ಲೈನ್ ನಲ್ಲಿ ಪಡೆಯುವುದು ಹೇಗೆ

Gen Z ಗಾಗಿ ಅಂಚೆ ಇಲಾಖೆಯಿಂದ ಹೊಸ ಪ್ಲ್ಯಾನ್: ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments