ಅಭಿಮನ್ಯು ನಿಖಿಲ್ ನನ್ನು ಅರ್ಜುನ ಮಾಡಲು ಹೊರಟ ಕುಮಾರಸ್ವಾಮಿ: ಇಂದಿನಿಂದ ಮಗನ ಪರ ಪ್ರಚಾರ ಶುರು

Krishnaveni K
ಸೋಮವಾರ, 28 ಅಕ್ಟೋಬರ್ 2024 (09:39 IST)
ಚನ್ನಪಟ್ಟಣ: ಅಭಿಮನ್ಯು ಎಂದು ಮಗನ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾಲೆಳೆದ್ದಿದ್ದಕ್ಕೆ ಈ ಸಲ ಅರ್ಜುನನಾಗುತ್ತಾನೆ ಎಂದಿದ್ದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಈಗ ಪ್ರಚಾರ ಕಣಕ್ಕಿಳಿಯುತ್ತಿದ್ದಾರೆ.

ಇಂದಿನಿಂದ ಚನ್ನಪಟ್ಟಣದಲ್ಲಿ ಎಚ್ ಡಿ ಕುಮಾರಸ್ವಾಮಿ ಪ್ರಚಾರ ಶುರು ಮಾಡಲಿದ್ದಾರೆ. ನಿಖಿಲ್ ಕುಮಾರಸ್ವಾಮಿ ಎನ್ ಡಿಎ ಅಭ್ಯರ್ಥಿಯಾಗಿ ತಮ್ಮ ತಂದೆ ಕುಮಾರಸ್ವಾಮಿಯಿಂದ ತೆರವಾದ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಅವರಿಗೆ ಎದುರಾಳಿಯಾಗಿ ಬಿಜೆಪಿಯಿಂದ ಬಂಡಾಯವೆದ್ದು ಕಾಂಗ್ರೆಸ್ ಸೇರಿಕೊಂಡಿರುವ ಸಿಪಿ ಯೋಗೇಶ್ವರ್ ಇದ್ದಾರೆ.

ಹೀಗಾಗಿ ಈ ಚುನಾವಣೆ ಕುಮಾರಸ್ವಾಮಿಯವರಿಗೆ ಪ್ರತಿಷ್ಠೆಯ ಕಣವಾಗಿದೆ. ಈಗಾಗಲೇ ನಿಖಿಲ್ ಎರಡು ಬಾರಿ ಸೋತಿದ್ದಾರೆ. ಹೀಗಾಗಿ ಈ ಬಾರಿ ಮಗನನ್ನು ಗೆಲ್ಲಿಸಲೇಬೇಕು ಎಂದು ಪಣ ತೊಟ್ಟಿದ್ದಾರೆ ಕುಮಾರಸ್ವಾಮಿ. ಈ ಕಾರಣಕ್ಕೆ ಇಂದಿನಿಂದ ತಾವೇ ಪ್ರಚಾರ ಕಣಕ್ಕಿಳಿಯುತ್ತಿದ್ದಾರೆ.

ನಿನ್ನೆಯಿಂದಲೇ ನಿಖಿಲ್ ಪ್ರಚಾರ ಶುರು ಮಾಡಿದ್ದರು. ಇಂದು ಅವರಿಗೆ ತಂದೆಯೂ ಸಾಥ್ ನೀಡುತ್ತಿರುವುದು ಬಲ ಬಂದಂತಾಗಲಿದೆ. ಇದಕ್ಕೆ ಮೊದಲು ನಿನ್ನೆಯೇ ಹಾಸನಾಂಬೆಯ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಇಂದು ಮಗನ ಜೊತೆ ರೋಡ್ ಶೋ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ರಾಜ್ಯದಲ್ಲಿ ಒಂದೇ ದಿನದಲ್ಲಿ 257 ಆರೋಪಿಗಳ ಬಂಧನ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments